ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ಸರ್ಕಾರ ಕೆಪಿಎಸ್ಸಿ ಕರ್ಮಕಾಂಡಗಳನ್ನು ಮುಚ್ಚಿಹಾಕಲು ಕೆಪಿಎಸ್ಸಿ ಅಭ್ಯರ್ಥಿಗಳ ಮೇಲೆ ದೈಹಿಕ ದೌರ್ಜನ್ಯ ಎಸಗುತ್ತಿದೆ. ಸರ್ಕಾರದ ಅನ್ಯಾಯವನ್ನು ಪ್ರಶ್ನಿಸಿದರೆ ಪೊಲೀಸ್ಬಲ ಪ್ರಯೋಗಿಸಿ ಜನಧ್ವನಿಯನ್ನು ಅಡಗಿಸುವ ಕೆಲಸಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಆರೋಪಿಸಿದೆ.
ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ಬಾರದ ಈ ಅಸಮರ್ಥ ಕರ್ನಾಟಕ ಕಾಂಗ್ರೆಸ್ ಸರ್ಕಾರ ಪರೀಕ್ಷಾರ್ಥಿಗಳನ್ನು ಮಾತ್ರ ಹೀನಾಯವಾಗಿ ನಡೆಸಿಕೊಳ್ಳುತ್ತಿದೆ ಎಂದು ಬಿಜೆಪಿ ಟೀಕಿಸಿದೆ.