ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ರಸ್ತೆಗುಂಡಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ದಿವಾಳಿತನವನ್ನ ಎತ್ತಿ ತೋರಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಸರ್ಕಾರದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮತ್ತು ಭ್ರಷ್ಟಚಾರವನ್ನ ಬಯಲು ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
“ರಾಜ್ಯ ಸರ್ಕಾರದ ಯಾವುದೇ ಯೋಜನೆ ಮೈಸೂರಿನಿಂದ ಪ್ರಾರಂಭವಾಗಿ ದಾವಣಗೆರೆಗೆ ಬಂದು ನಿಂತುಬಿಡುತ್ತದೆ, ಬಳ್ಳಾರಿಯವರೆಗೂ ತಲುಪುವುದಿಲ್ಲ” ಎಂದು ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೆಹಲಿಯಿಂದ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಜನರಿಗೆ ತಲುಪುವಷ್ಟರಲ್ಲಿ 15 ಪೈಸೆ ಆಗಿರುತ್ತದೆ ಎಂದು ರಾಜೀವ ಗಾಂಧಿ ಅವರು ಕಾಂಗ್ರೆಸ್ ಆಡಳಿತದಲ್ಲಿ 85% ಭ್ರಷ್ಟಚಾರ ಇಟ್ಟು ಎಂದು ಒಪ್ಪಿಕೊಂಡಿದ್ದರು ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.
ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕಕ್ಕೆ ಬಿಡುಗಡೆ ಆಗುವ ಅನುದಾನ ದಾವಣಗೆರೆಯಲ್ಲಿಯೇ ನಿಂತು ಹೋಗುತ್ತದೆ, ಬಳ್ಳಾರಿಯೂ ತಲುಪಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಒಪ್ಪಿಕೊಂಡಿದ್ದಾರೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.

