ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗಿದ್ದು, ಬಿರು ಬೇಸಿಗೆಯಲ್ಲಿ ಕಾವೇರಿ ತೀರದ ರೈತರು ನೀರಿಗಾಗಿ ಪಡಬಾರದ ಕಷ್ಟ ಪಡುತ್ತಿದ್ದಾರೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಶನಿವಾರವಷ್ಟೆ ಚೆನ್ನೈಗೆ ತೆರಳಿ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಬಂದ ಮಾರನೇ ದಿನವೇ KRS ನಿಂದ ನೀರು ಹರಿಸಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಮಾರ್ಚ್23 (ಭಾನುವಾರ)ರಂದು ಕೆಆರ್ಎಸ್ ಜಲಾಶಯದ +80 ಗೇಟ್ಏಕಾಏಕಿತೆರೆದು, 2 ಸಾವಿರ ಕ್ಯೂಸೆಕ್ಗಿಂತ ಹೆಚ್ಚು ನೀರುಹರಿದಿದೆ.
ಕರ್ನಾಟಕದ ಮೇಕೆದಾಟು ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದು ತಮಿಳುನಾಡು ಅಡ್ಡಿ ಪಡಿಸುತ್ತಲೇ ಇದೆ. ಆದರೆ, ರಾಜಕೀಯ ಲಾಭಕ್ಕಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ, ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ದ್ರೋಹ ಬಗೆಯುತ್ತ ಕಳ್ಳಾಟವಾಡುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.