ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ, ತಮ್ಮ ಕುರ್ಚಿ ಅಲುಗಾಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರ ಬೀಳಿಸಲು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಮತ್ತೊಂದು ಹಸಿ ಸುಳ್ಳು ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿಎಂ ವಿರುದ್ಧ ಹರಿಹಾಯ್ದರು.
ನಮಗೆ ಯಾವುದೇ ಆಫರ್ ಬಂದಿಲ್ಲ ಎಂದು ಈಗ ಸ್ವತಃ ಕಾಂಗ್ರೆಸ್ ಶಾಸಕರೇ ಖಚಿತಪಡಿಸಿದ್ದು, ಆ ಮೂಲಕ ಸಿದ್ದರಾಮಯ್ಯನವರು ಹೇಳಿದ್ದು ಸುಳ್ಳು ಎಂದು ಕಾಂಗ್ರೆಸ್ ಶಾಸಕರೇ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ್ದ 40% ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿ ಸಾಬೀತು ಮಾಡಿದೆ. ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿರುವುದು ಸುಳ್ಳು ಎಂದು ಸ್ವತಃ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಬಾಯಿ ತೆರೆದರೆ ಬರೀ ಸುಳ್ಳು ಹೇಳುತ್ತೀರಲ್ಲ, ಇನ್ನೆಷ್ಟು ದಿನ ಈ ಭಂಡ ಬಾಳು? ನೀವು ಹೇಳಿದ್ದು ಸತ್ಯವಾದರೆ ಆ ಕಾಂಗ್ರೆಸ್ ಶಾಸಕರ ಹೆಸರು ಬಹಿರಂಗಪಡಿಸಿ. ಎಸ್ಐಟಿ ರಚನೆ ಮಾಡಿ ತನಿಖೆ ಮಾಡಿಸಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.