ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲೀ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗ ಏನು ಮಾಡುತ್ತಿದ್ದೀರಿ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ಬಡವರ ಮಕ್ಕಳ ಶಿಕ್ಷಣಕ್ಕೆ ದಾರಿ ದೀಪವಾಗಿರುವ ಸರ್ಕಾರಿ ಶಾಲೆಗಳು ಕರ್ನಾಟಕ ಕಾಂಗ್ರೆಸ್ ದುರಾಡಳಿತದಿಂದ ಮೂಲ ಸೌಲಭ್ಯಗಳಿಲ್ಲದೆ ನಲುಗಿಹೋಗಿವೆ.
ಈ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ ಮಕ್ಕಳ ಶಿಕ್ಷಣವನ್ನೂ ಕಿತ್ತುಕೊಳ್ಳುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
6 ತಿಂಗಳಾದರೂ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ನೀಡಿಲ್ಲ, ಶಿಕ್ಷಕರ ನೇಮಕಾತಿಗೆ ದುಡ್ಡಿಲ್ಲ, ಶಾಲೆಗಳ ದುರಸ್ತಿಗೆ ಅನುದಾನ ವಿಲ್ಲ. ಒಟ್ನಲ್ಲಿ ಬಡ ಮಕ್ಕಳ ಭವಿಷ್ಯದ ಬಗ್ಗೆ ಕಾಂಗ್ರೆಸ್ಸರ್ಕಾರಕ್ಕೆ ಚಿಂತೆಯಿಲ್ಲ ಎನ್ನುವುದು ಜಗಜ್ಜಾಹೀರಾಗುತ್ತಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

