ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಗೇಟುಗಳನ್ನು ದುರಸ್ತಿ ಮಾಡದೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಡ್ಯಾಂ ಕ್ರಸ್ಟ್ ಗೇಟ್ ಕಿತ್ತು ಹೋಗಿ ವರ್ಷಗಳೇ ಕಳೆದರೂ ಇನ್ನೂ ಸರಿಪಡಿಸಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಇವರ ನಿರ್ಲಕ್ಷ್ಯದಿಂದ
ಬರೋಬ್ಬರಿ 240 ಟಿಎಂಸಿ ನೀರು ವ್ಯರ್ಥವಾಗಿ ಹೊರ ಬಿಡಲಾಗುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.

