ಕಾಂಗ್ರೆಸ್ ಸರ್ಕಾರದ ಎಡಬಿಡಂಗಿ ಆದೇಶ ಈಗ ದೇಶದ ಕರಾವಳಿ ಭದ್ರತೆಗೆ ದೊಡ್ಡ ಗಂಡಾಂತರ

News Desk

ಚಂದ್ರವಳ್ಳಿ ಬೆಂಗಳೂರು ಕರ್ನಾಟಕ                          ಕಾಂಗ್ರೆಸ್ ಸರ್ಕಾರದ ಎಡಬಿಡಂಗಿ ಆದೇಶ ಈಗ ದೇಶದ ಕರಾವಳಿ ಭದ್ರತೆಗೆ ದೊಡ್ಡ ಗಂಡಾಂತರ ತಂದೊಡ್ಡಿದೆ ಎಂದು ಜೆಡಿಎಸ್ ಆರೋಪಿಸಿದೆ.

ಸಿದ್ದರಾಮಯ್ಯ ಸರ್ಕಾರ ಕರಾವಳಿ ಕಾವಲು ಪಡೆ ಬಳಸುವ ಬೋಟ್‌ಗಳಿಗೆ ನೀಡುವ ಇಂಧನ ಪ್ರಮಾಣವನ್ನು ಶೇ.50% ಕಡಿತಗೊಳಿಸಿರುವುದು, ಭದ್ರತೆ ದೃಷ್ಟಿಯಿಂದ ಸಮುದ್ರ ಗಸ್ತು ಕಾರ್ಯಾಚರಣೆಗೆ ಭಾರಿ ಹೊಡೆತ ಬಿದ್ದಿದೆ.

- Advertisement - 

ಬೋಟ್​ಗಳಿಗೆ ಮಾಸಿಕ ಪೂರೈಕೆ ಮಾಡುತ್ತಿದ್ದ 600 ಲೀಟರ್‌ ಇಂಧನವನ್ನು, ಕೇವಲ 250 ಲೀಟರ್​ಗೆ ಸೀಮಿತಗೊಳಿಸಿದೆ. ಇದರ ಪರಿಣಾಮ ದಿನಕ್ಕೆ 10 ತಾಸಿನವರೆಗೂ ಗಸ್ತು ತಿರುಗುತ್ತಿದ್ದ ಕಾವಲು ಪಡೆ ಕೇವಲ 1 ಗಂಟೆ ಮಾತ್ರ ಸಮುದ್ರದಲ್ಲಿ ಗಸ್ತು ತಿರುಗಲು ಸಾಧ್ಯ ಎಂದು ಜೆಡಿಎಸ್ ತಿಳಿಸಿದೆ.

ಸರ್ಕಾರದ ಇಂಧನ ಕಡಿತ ಆದೇಶ ಮುಂದೊಂದು ದಿನ ರಾಜ್ಯದ ಭದ್ರತೆಗೂ ಹಾನಿ ಉಂಟುಮಾಡುವುದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರ್ಕಾರ ಭದ್ರತೆಯ ದೃಷ್ಟಿಯಿಂದ ಈ ಎಡವಟ್ಟು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.

- Advertisement - 

Share This Article
error: Content is protected !!
";