ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ, ದೇಶದ ಮತದಾರ ಕಾಂಗ್ರೆಸ್ ತಿರಸ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ಸಾಧಿಸಿದ್ದು
, ಈ ಅಭೂತಪೂರ್ವ ಗೆಲುವಿಗೆ ಕಾರಣೀಭೂತರಾದ ಎಲ್ಲ ನಾಯಕರಿಗೆ ಹಾಗು ಕಾರ್ಯಕರ್ತರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement - 

ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ನಂತರ ಈಗ ದೆಹಲಿ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ತೋರಿದ್ದು, ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.

- Advertisement - 

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿಯ ಸಕಾರಾತ್ಮಕ ರಾಜಕಾರಣಕ್ಕೆ ಮೊಹರು ಒತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯ ಜನತೆ, ಇಂಡಿ ಮೈತ್ರಿಕೂಟಕ್ಕೆ ಭವಿಷ್ಯವಿಲ್ಲ ಎನ್ನುವುದನ್ನ ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";