ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಅದರೊಂದಿಗೆ ವ್ಯವಹರಿಸಿ ಕೊನೆಗೆ ಸುಳ್ಳು ದಾಖಲೆ ಒದಗಿಸಿ ದೇಶದ ಸಂಪತ್ತನ್ನು ಲೂಟಿ ಹೊಡೆಯುವ ಸರಣಿ ಕೃತ್ಯಗಳನ್ನು ಭಾರತೀಯ ಕಾಂಗ್ರೆಸ್ ಪಕ್ಷದ ನಾಯಕರು ಮಾಡುತ್ತಲೇ ಬಂದಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ನ್ಯಾಷನಲ್ಹೆರಾಲ್ಡ್ಪ್ರಕರಣದಲ್ಲಿ ಸೋನಿಯಾ ಗಾಂಧಿ ಪರಿವಾರ 2 ಸಾವಿರ ಕೋಟಿ ಲೂಟಿ ಹೊಡೆಯಲು ಸಂಚು ರೂಪಿಸಿತ್ತು ಎಂದು ಬಿಜೆಪಿ ದೂರಿದೆ.
ಕಾಂಗ್ರೆಸ್ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಾಗಿದೆ. ಕಾಂಗ್ರೆಸ್ಭ್ರಷ್ಟಾಚಾರವನ್ನು ಬಿಡುವುದಿಲ್ಲ, ಭ್ರಷ್ಟಾಚಾರ ಕಾಂಗ್ರೆಸ್ಪಕ್ಷವನ್ನು ಬಿಡುತ್ತಿಲ್ಲ. ಅಧಿಕಾರ ದುರುಪಯೋಗದ ಕಾರಣದಿಂದಾಗಿ ಸೋನಿಯಾ ಕುಟುಂಬದ ಭ್ರಷ್ಟಾಚಾರಗಳು ಹೊರಬರುತ್ತಿರಲಿಲ್ಲ. ಕಾಂಗ್ರೆಸ್ಸಿನ ಸೋನಿಯಾ ಮೇನಿಯಾದ ವ್ಯಾಲಿಡಿಟಿ ಮುಗಿದ ಕಾರಣ ಈಗ ಎಲ್ಲವೂ ಬಯಲಾಗುತ್ತಿದೆ.
ತನಿಖಾ ಸಂಸ್ಥೆಗಳು ದಾಖಲೆಗಳ ಆಧಾರದಲ್ಲಿ ತನಿಖೆ ನಡೆಸಿ, ಚಾರ್ಜ್ಶೀಟ್ಸಲ್ಲಿದರೆ ಅದಕ್ಕೂ ಕಾಂಗ್ರೆಸ್ಪಕ್ಷ ರಾಜಕೀಯದ ಲೇಪ ಮೆತ್ತುತ್ತಿದೆ. ಕಾಂಗ್ರೆಸ್ನಾಯಕರಿಗೆ ತಾಕತ್ತಿದ್ದರೆ ನ್ಯಾಯಾಲಯದ ಮೂಲಕವೇ ಹೋರಾಡಲಿ, ಬೀದಿಗಳಿದು ಹೋರಾಡಿ ನ್ಯಾಯಾಂಗ ವ್ಯವಸ್ಥೆಯ ಹಾದಿ ತಪ್ಪಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಎಚ್ಚರಿಸಿದೆ.