ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಗಾಲಿ ಜನಾರ್ದನರೆಡ್ಡಿ ನಿಂದನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಶಾಸಕರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಜನಾರ್ದನರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ದಿಢೀರ್ ಪ್ರತಿಭಟನೆ ನಡೆಸಿದ್ದು ಈ ವೇಳೆ ಪೊಲೀಸರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ನನಗೆ ರಕ್ಷಣೆ ನೀಡಲಾಗಿಲ್ಲ ಅಂದ್ರೆ ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ಬಳ್ಳಾರಿ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಬಗ್ಗೆ ಜನಾರ್ದನರೆಡ್ಡಿ ಟೀಕೆ ಮಾಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಯತ್ನ ನಡೆಸಿದ್ದಾರೆ.

