ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ಸರ್ಕಾರದನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರುಗಳ ಮಧ್ಯ ‘ಬ್ರೇಕ್ ಫಾಸ್ಟ್ ಮೀಟಿಂಗ್’ ಮುಂದುವರಿದಿದೆ.
ಬ್ರೇಕ್ ಫಾಸ್ಟ್ ಭಾಗವಾಗಿ ಮಂಗಳವಾರ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು.
ಜತೆಗೆ ಮಾತುಕತೆಯೂ ನಡೆಯಿತು. ಆದರೆ, ಡಿಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್ ವೆಜ್ ಸೇವಿಸಲಿಲ್ಲ.

