ಚಿತ್ತಾಪುರ ರಿಪಬ್ಲಿಕ್ ಮಂದಿಗೆ ಕೋರ್ಟ್ ಚಾಟಿ!
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ತಾಪುರ ರಿಪಬ್ಲಿಕ್ನ ‘ರಜಾಕರಿಗೆ’ ಕೋರ್ಟ್ ಚಾಟಿ! ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನಕ್ಕೆ ವಿಧಿಸಿದ್ದ ನಿಷೇಧವನ್ನು ಹೈಕೋರ್ಟ್ ರದ್ದು ಮಾಡಿ, ನವೆಂಬರ್ 2ರಂದು ಪಥ ಸಂಚಲನ ನಡೆಸಲು ಅನುಮತಿ ನೀಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಜನರು ಮಾತಬಿಕ್ಷೆ ನೀಡಿ ಗೆಲ್ಲಿಸಿಸುವ ಕ್ಷೇತ್ರವನ್ನು ತಮ್ಮದೇ ರಿಪಬ್ಲಿಕ್ ಎಂದು ಭಾವಿಸಿಕೊಂಡು, ದೇಶಭಕ್ತರ ಪಥ ಸಂಚಲನವನ್ನು ತಡೆಯಲು ಯತ್ನಿಸಿದ ಚಿತ್ತಾಪುರದ ‘ರಜಾಕರು’ ಇಂದು ನ್ಯಾಯದ ಮುಂದೆ ತಲೆಬಾಗಬೇಕಾದ ಪರಿಸ್ಥಿತಿ ಬಂದಿದೆ.
ದೇಶಭಕ್ತಿ, ಶಿಸ್ತು ಮತ್ತು ಸೇವೆಯ ಪ್ರತೀಕವಾದ RSS ಪಥಸಂಚಲನವನ್ನು ತಡೆಯಲು ನಡೆದ ರಾಜಕೀಯ ನಾಟಕ ಈಗ ಸಂಪೂರ್ಣವಾಗಿ ಬಯಲಾಗಿದೆ.
ಸತ್ಯವನ್ನು ತಾತ್ಕಾಲಿಕವಾಗಿ ತಡೆಯಬಹುದು, ಆದರೆ ಶಾಶ್ವತವಾಗಿ ಸೋಲಿಸಲು ಸಾಧ್ಯವಿಲ್ಲ. ಹೈಕೋರ್ಟ್ ತೀರ್ಪು ಇದರ ಜೀವಂತ ಸಾಕ್ಷಿ! ಎಂದು ಅಶೋಕ್ ಟೀಕಿದ್ದಾರೆ.

