ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ 2025ರ ಫೆಬ್ರವರಿ 1ರ ಕೇಂದ್ರ ಬಜೆಟ್ ಬಜೆಟ್ ನಲ್ಲಿ ಬೆಂಗಳೂರು ನಗರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್ಗೆ 12 ಸಾವಿರ ಕೋಟಿ ರೂ.ಗಳು ಸೇರಿದಂತೆ ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ ಎಂದು ಡಿಸಿಎಂ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರಿನಲ್ಲಿ ಸದ್ಯ ಒಂದುವರೆ ಕೋಟಿ ಜನಸಂಖ್ಯೆ ಇದೆ. ಬಿಸಿನೆಸ್ ಕಾರಿಡಾರ್ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಹೀಗಾಗಿ ಈ ಬಾರಿಯ ಬಜೆಟ್ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ ಎಂದು ಪತ್ರ ಬರೆದಿದ್ದಾರೆ.

