ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸದನದಲ್ಲಿ ಹುಲಿ, ಹೈಕಮಾಂಡ್ಮುಂದೆ ಇಲಿ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.
ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.
ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ನೀಡಿರಲಿಲ್ಲ.
ಭಾರತೀಯ ಕಾಂಗ್ರೆಸ್ ಹೈಕಮಾಂಡ್ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಇದೆ ಎಂದು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.

