ಇಡೀ ದೇಶದಲ್ಲಿ ಕರ್ನಾಟಕದ ಪೊಲೀಸರಿಗೆ ಹೆಚ್ಚು ಗೌರವ-ಡಿಸಿಎಂ ಡಿಕೆಶಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇಷಾದ್ರಿಪುರಂ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ
, ಹೈಗ್ರೌಂಡ್ಸ್ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆ ಹಾಗೂ  ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡಗಳನ್ನು ಮತ್ತು ಪುಲಕೇಶಿನಗರದ ನೂತನ ಪೊಲೀಸ್ ವಸತಿ ಗೃಹಗಳನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದರು.

ಈ ವೇಳೆ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಇಡೀ ದೇಶದಲ್ಲಿ ಕರ್ನಾಟಕದ ಪೊಲೀಸರಿಗೆ ಹೆಚ್ಚು ಗೌರವವಿದೆ. ಜನರು ನೆಮ್ಮದಿಯಾಗಿ ಇರಬೇಕಾದರೆ ಇದಕ್ಕೆ ಪೊಲೀಸ್ ಇಲಾಖೆಯೇ ಮುಖ್ಯ ಕಾರಣ ಎಂದು ತಿಳಿಸಿದರು.

- Advertisement - 

ನಿರಂತರವಾಗಿ ತಮ್ಮನ್ನು ತಾವು ಕರ್ತವ್ಯದಲ್ಲಿ ತೊಡಗಿಸಿಕೊಂಡು ಸಮಾಜ ಹಾಗೂ ನಮ್ಮನ್ನು ರಕ್ಷಣೆ ಮಾಡುವುದರಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ರಾಜ್ಯದಲ್ಲಿನ ಪೊಲೀಸ್ ಅಧಿಕಾರಿಗಳ ಕರ್ತವ್ಯ ನಿಷ್ಠೆ ನಿಜಕ್ಕೂ ಶ್ಲಾಘನೀಯ ಎಂದು ಡಿ.ಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

 

- Advertisement - 

Share This Article
error: Content is protected !!
";