ಮಾಧ್ಯಮಗಳ ವಿರುದ್ಧ ಹರಿಹಾಯ್ದ ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧವೇ ಕೆಲವು ಕಾಂಗ್ರೆಸ್ ನಾಯಕರು, ಸಚಿವರು ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು
, ಮಾಧ್ಯಮಗಳ ವಿರುದ್ಧವೇ ಹರಿಹಾಯ್ದಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು
, ಸುಳ್ಳು ಹೇಳಿ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸತೀಶ್ ಜಾರಕಿಹೊಳಿ ಆಪ್ತ ಆಸೀಫ್ ಸೇಠ್ ನಿವಾಸಕ್ಕೆ ಡಿಕೆ ಶಿವಕುಮಾರ್ ಭಾನುವಾರ ಭೇಟಿಕೊಟ್ಟಿದ್ದರು. ಹೀಗಾಗಿ, ಸತೀಶ್ ಆಪ್ತರ ಮನವೊಲಿಕೆಗೆ ಮುಂದಾದರೇ ಡಿಕೆಶಿ ಎಂಬ ಬಗ್ಗೆಯೂ ವರದಿಗಳು ಪ್ರಕಟವಾಗಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್, ನಿನ್ನೆ ಪಕ್ಷದ ಹಿರಿಯ ನಾಯಕರ ನಿವಾಸಕ್ಕೆ ಭೇಟಿ ನೀಡಿದ್ದೆ. ಜಗಳ ಇತ್ತು ಅದಕ್ಕೆ ಹೋಗಿದ್ದರು ಎಂದು ನೀವು (ಮಾಧ್ಯಮದವರು) ಹೇಳುತ್ತಿದ್ದೀರಿ. ಫಿರೋಜ್ ಸೇಠ್ ಹಿರಿಯರು, ಅವರ ಜತೆ ಕೆಲಸ ಮಾಡಿದ್ದೇವೆ. ಸಂಘಟನೆ ದೃಷ್ಟಿಯಿಂದ ನಿವಾಸಕ್ಕೆ ಹೋಗಿ ಬಂದಿದ್ದೆ ಎಂದು ಅವರು ತಿಳಿಸಿದರು.

ಸುರ್ಜೇವಾಲ ಎಲ್ಲರನ್ನೂ ಒಂದೇ ರೀತಿ ನಡೆಸಿಕೊಳ್ಳುತ್ತಿಲ್ಲ. ಅವರ ಬಗ್ಗೆ ರಾಹುಲ್ ಗಾಂಧಿಯವರಿಗೆ ದೂರು ನೀಡಬೇಕು. ರಾಜ್ಯ ಉಸ್ತುವಾರಿಯಿಂದ ವಾಪಸ್ ಕರೆಸಿಕೊಳ್ಳುವಂತೆ ಒತ್ತಡ ಹೇರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಕೆಲವು ಸಚಿವರು ಆಗ್ರಹಿಸಿದ್ದಾರೆ ಎನ್ನಲಾಗಿತ್ತು.

ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಪ್ರಯುಕ್ತ ದೆಹಲಿ ಹಾಗೂ ದೇಶದ ಮೂಲೆ ಮೂಲೆಯ ನಾಯಕರ ಜತೆ ಸಂಪರ್ಕದಲ್ಲಿದ್ದೆನೆ. ಸುಮಾರು ಅರವತ್ತು ಜನ ಬೇರೆ ಬೇರೆ ಕಡೆಯಿಂದ ಬರುತ್ತಿದ್ದಾರೆ. ಬಹುತೇಕ ಎಲ್ಲ ಶಾಸಕರು, ಎಂಎಲ್ಸಿಗಳು ಬರುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಬರುವುದು ಖಚಿತವಾಗಿದೆ.

ಜೈ ಭೀಮ್, ಜೈ ಗಾಂಧಿ, ಜೈ ಸಂವಿಧಾನ ಸಮಾವೇಶದ ಮೂಲಕ ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ಮರಣೆ ಮಾಡುವುದು ಹಾಗೂ ಸಂವಿಧಾನ ರಕ್ಷಣೆ ನಮ್ಮ ಮೂಲ ಉದ್ದೇಶವಾಗಿದ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ದೆಹಲಿ ಚುನಾವಣೆ ಉಸ್ತುವಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್, ನಾನೇ ಹೋಗಿ 2500 ರೂ. ಪ್ಯಾರಿ ದೀದಿಗೆ ಚಾಲನೆ ನೀಡಿದ್ದೇನೆ. ನಮ್ಮ ಮುಖ್ಯಮಂತ್ರಿಗಳು ಬಜೆಟ್ ತಯಾರಿಯಲ್ಲಿದ್ದಾರೆ. ಎಲ್ಲಾ ಇಲಾಖೆಯವರ ಜತೆ ಸಭೆ ನಡೆಸಬೇಕಿದೆ. ಬಜೆಟ್ ಸಿದ್ಧಪಡಿಸಬೇಕಿದೆ. ಈ ಕಾರಣಕ್ಕಾಗಿ ಸಿಎಂ ಅವರಿಗೆ ಚುನಾವಣೆ ಉಸ್ತುವಾರಿ ಬಿಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.

 

- Advertisement -  - Advertisement -  - Advertisement - 
Share This Article
error: Content is protected !!
";