ಡಿಸಿಎಂ ಶಿವಕುಮಾರ್ ಅವರೇ ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು ಬೇಡ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ನಿಮ್ಮಲ್ಲೇನೋ ಮೂಲಭೂತ ಸಮಸ್ಯೆ ಇದೆ. ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು! ಅದಕ್ಕೆ ಏನೋ ಬೆಂಗಳೂರಿನ ಮೂಲಭೂತ ಸೌಕರ್ಯ ಎಕ್ಕುಟ್ಟಿ ಹೋಗಿದೆ ಎಂದು ಜೆಡಿಎಸ್ ದೂರಿದೆ.

ಬಹುಶಃ, ನಿಮಗೆ ನೆಟ್ ವರ್ಕಿಂಗ್ ಸಮಸ್ಯೆ ಕಾಡುತ್ತಿರಬಹುದು. ನಿಮ್ಮ ಮಿದುಳು, ನಾಲಿಗೆಯ ನಡುವೆ ಲೈನಪ್ ಸರಿ ಇದ್ದಂತೆ ಇಲ್ಲ! ಏಕೆಂದರೆ, ಇನ್ನೊಬ್ಬರ ಹೇಳಿಕೆಯನ್ನು ಅರ್ಥೈಸಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ನಿಮಗಿಲ್ಲ. ಅಸಂಬದ್ಧವಾಗಿ ಪ್ರತಿಕ್ರಿಯೆ ಕೊಡುತ್ತೀರಿ. ನಗೆಪಾಟಲಿಗೆ ತುತ್ತಾಗುತ್ತೀರಿ ಎಂದು ಜೆಡಿಎಸ್ ಎಚ್ಚರಿಸಿದೆ.

- Advertisement - 

ನಗರದ ಮೂಲಸೌಕರ್ಯದ ಬಗ್ಗೆ ಉದ್ಯಮಿಗಳು ಕಳವಳಗೊಂಡಾಗ ಅವರಿಗೆ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ನೈತಿಕ ಸ್ಥೈರ್ಯ ತುಂಬಿದ್ದಾರೆ. ಅದರಲ್ಲಿ ತಪ್ಪೇನಿದೆ?

ಕೇಂದ್ರದ ಅನುದಾನ ತರಲಿ ಎನ್ನುತ್ತೀರಿ? ಟ್ವಿಟ್ಟರ್ ಗಿಟ್ಟರ್ ಎನ್ನುತ್ತೀರಿ.. ಆ ಬಗ್ಗೆ ಆಮೇಲೆ ಹೇಳೋಣ. ತೆರಿಗೆ ಬೀಜಾಸುರ ನಂತೆ ಬೆಂಗಳೂರು ಜನರ ರಕ್ತ ಹೀರಿ ತೆರಿಗೆ ಪೀಕುತ್ತಿದ್ದೀರಲ್ಲ.. ಮೊದಲು ಅದಕ್ಕೆ ಲೆಕ್ಕ ಮಡಗಿ. ಅದು ಯಾರಪ್ಪನ ದುಡ್ಡು ಅಲ್ಲ. ಜನರ ಬೆವರಿನ ಹಣ. ಆ ದುಡ್ಡು ಎಲ್ಲಿ ಹೋಗುತ್ತಿದೆ? ಅದನ್ನೇ ಕುಮಾರಸ್ವಾಮಿ ಅವರು ಕೇಳಿದ್ದು.

- Advertisement - 

ಉದ್ಯಮಿಗಳಿಗೆ ಧಮ್ಕಿ ಹಾಕಿ, ದಾದಾಗಿರಿ ಮಾಡುವುದಕ್ಕೆ ನಿಮ್ಮನ್ನು ಡಿಸಿಎಂ ಮಾಡಿಲ್ಲ ಮಿ.ಶಿವಕುಮಾರ್ ಕೆಲಸ ಮಾಡಿ ಎಂದು ಜನ ಕೂರಿಸಿದ್ದಾರೆ. ಆ ಹಳೆಯ ಚಾಳಿ ಬಿಡಿ. ದಾದಾಗಿರಿಯ ದಿನಗಳು ಮುಗಿದವು. ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ. ಕೈಯಲ್ಲಿ ಆಗಲಿಲ್ಲ ಎಂದರೆ, ಬೆಂಗಳೂರು ಉಸ್ತುವಾರಿ ಬಿಡಿ. ಟ್ವಿಟ್ಟರ್ ಗಿಟ್ಟರ್ ಎಂದು ನಾಲಿಗೆ ಜಾರಬೇಡಿ. ಜಗತ್ತಿನಲ್ಲಿ ಏನೇನು ಆಗುತ್ತಿದೆ ಎಂಬುದನ್ನು ಗಮನಿಸಿ ಎಂದು ಜೆಡಿಎಸ್ ತಾಕೀತು ಮಾಡಿದೆ.

 

Share This Article
error: Content is protected !!
";