ಚಂದ್ರವಳ್ಳಿ ನ್ಯೂಸ್, ವಿಜಯನಗರ (ಹೊಸಪೇಟೆ):
‘ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ’ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ ಎಂಬ ಧ್ಯೇಯವಾಕ್ಯದಡಿ ಒಂದು ಲಕ್ಷ ಕುಟುಂಬಗಳಿಗೆ ನೆಮ್ಮದಿ ಕಂದಾಯ ಗ್ರಾಮ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಿಮಿತ್ತವಾಗಿ ಬೈಕ್ ರ್ಯಾಲಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಚಾಲನೆ ನೀಡುವ ಮೂಲಕ ರ್ಯಾಲಿಯಲ್ಲಿ ಭಾಗವಹಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಬೈಕ್ ರ್ಯಾಲಿ, ಬಾಬು ಜಗಜೀವನರಾಂ ವೃತ್ತ, ಡಾ.ಪುನೀತ್ ರಾಜಕುಮಾರ ವೃತ್ತ ಸೇರಿದಂತೆ ವಿವಿಧ ಪ್ರಮುಖ ಬೀದಿಗಳ ಮೂಲಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮಾರ್ಗವಾಗಿ ಗಾಂಧಿ ಚೌಕ್ವರೆಗೆ ನಡೆಸಲಾಯಿತು. ರ್ಯಾಲಿಯಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಲೋಕಸಭಾ ಸದಸ್ಯ ಈ.ತುಕಾರಾಮ್, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಕಂಪ್ಲಿ ಶಾಸಕ ಜೆ.ಗಣೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸೇರಿದಂತೆ ನೂರಾರು ಯುವಕರು ಭಾಗವಹಿಸಿದ್ದರು.