ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ, ಬೆಂ.ಗ್ರಾ.:
ಚಿತ್ರದುರ್ಗದಲ್ಲಿ ಎಂಬಿಬಿಎಸ್ ಓದುವ ಬೆಂಗಳೂರಿನ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಡೆಲಿವರಿ ಬಾಯ್ ಹತ್ಯೆ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮ ಒಂದರಲ್ಲಿ ನಡೆದಿದೆ.
ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಪ್ರೀತಂನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿರುವ ದುಷ್ಕರ್ಮಿಗಳು ಹತ್ಯೆ ಮಾಡಿ ಹೆಣವನ್ನು ಬಿಸಾಡಿದ್ದಾರೆ. ನೀರುಗುಂಟೆಪಾಳ್ಯ ಗ್ರಾಮದ ಪ್ರೀತಂ(19) ಕೊಲೆಯಾದ ಯುವಕ ಎನ್ನಲಾಗಿದ್ದು ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪೊಲೀಸ್ ಠಾಣೆ ಮುಂಭಾಗದಲ್ಲಿ ಮೃತ ಯುವಕನ ತಾಯಿ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತ ಯುವಕ ಪ್ರೀತಂ ಡೆಲಿವರಿ ಬಾಯ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ತನಗಿಂತ 2 ವರ್ಷ ದೊಡ್ಡವಳಾದ ಯುವತಿಳೊಂದಿಗೆ ಪ್ರೀತಿ ಮಾಡುತ್ತಿದ್ದ. ಬೆಂಗಳೂರಿನವಳಾದ ಯುವತಿ ಚಿತ್ರದುರ್ಗದಲ್ಲಿ ಎಂಬಿಬಿಎಸ್ ಓದುತ್ತಿದ್ದಳು. ಯುವತಿಯೊಂದಿಗೆ ಮೃತ ಯುವಕ ಪ್ರೀತಿ ಮಾಡುವ ವಿಚಾರ ತಿಳಿದು ಯುವತಿ ಸಂಬಂಧಿಕರು ಯುವಕನಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಆದರೆ ವಾರ್ನಿಂಗ್ ಹೆದರದೇ ಯುವತಿಯನ್ನು ಪ್ರೀತಂ ಯುವತಿಯನ್ನು ಪ್ರೀತಿ ಮಾಡುತ್ತಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಪ್ರೀತಂನನ್ನು ಯುವತಿ ಚಿಕ್ಕಮ್ಮನ ಮಗ ಶ್ರೀಕಾಂತ್ ಮತ್ತು ಸಹಚರರು ಕಿಡ್ನ್ಯಾಪ್ ಮಾಡಿ ಕಂಠಪೂರ್ತಿ ಕುಡಿದು ಮಾರಣಾಂತಿಕ ಹಲ್ಲೆ ಮಾಡಿ ಶವ ಬಿಸಾಕಿ ಆರೋಪಿಗಳು ಪರಾರಿಯಾಗಿರುವ ಆರೋಪ ಕೇಳಿ ಬಂದಿದೆ.
ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ತಾಯಿ ಮತ್ತು ಸಂಬಂಧಿಕರು ಕಣೀರು ಹಾಕುತ್ತಾ ಯುವಕನ ಸಾವಿಗೆ ನ್ಯಾಯ ಕೊಡಿಸಿ ಎಂದು ಪೊಲೀಸರಲ್ಲಿ ಮನವಿ ಮಾಡುತ್ತಿದ್ದ ದೃಶ್ಯ ಮನ ಕರಗುವಂತಿತ್ತು.
ಯುವತಿ ತಂದೆ ಶ್ರೀನಿವಾಸ್ ಯುವಕನ ಹತ್ಯೆ ಕುರಿತು ಪ್ರತಿಕ್ರಿಯಿಸಿ, ಈ ಹತ್ಯೆಯಲ್ಲಿ ನನ್ನ ಮಗಳು ಶ್ವೇತಾ(ಹೆಸರು ಬದಲಾಯಿಸಲಾಗಿದೆ) ಚಿತ್ರದುರ್ಗದಲ್ಲಿ ಎಂಬಿಬಿಎಸ್ ಓದುತ್ತಿದ್ದಾಳೆ. ಈಹುಡುಗ ಪತ್ರ ಬರೆದುಕೊಂಡು ನನ್ನ ಮಗಳಿಗೆ ಲವ್ ಮಾಡುತ್ತಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದನಂತೆ. ಮಗಳು ಇತ್ತೀಚೆಗೆ ನನ್ನ ಬಳಿ ಹೆಚ್ಚಿನ ಹಣ ಕೇಳುತ್ತಿದ್ದಳು. ಏಕೆ ಎಂದು ಕೇಳಿದ್ದೇ. ಅವಳು ಏನೂ ಹೇಳಿರಲಿಲ್ಲ. ಮನೆಗೆ ಬಂದಾಗ ಅವಳ ಫೋನ್ ಚೆಕ್ ಮಾಡಿದಾಗ ಫ್ರೆಂಡ್ ಮೂಲಕ ಕೊಲೆಯಾದ ಪ್ರೀತಂಗೆ ಹಣ ಹಾಕಿಸಿದ್ದಳು. ಕೇಳಿದಕ್ಕೆ ನನ್ನ ಫೋಟೋ ಇಟ್ಕೊಂಡು ಬೆದರಿಸುತ್ತಿದ್ದ, ಅದಕ್ಕೆ ಹಣ ಹಾಕಿದ್ದೆ ಅಂತ ಹೇಳಿದ್ದಳು. ಹೀಗಾಗಿ ನನ್ನ ಮಗಳಿಗೆ ನಾನು ಬೈದು ಬುದ್ದಿವಾದ ಹೇಳಿದ್ದೆ. ಬಳಿಕ ಸಿಮ್ ಚೇಂಜ್ ಮಾಡಿ ಫೋನ್ ಪೇ ಎಲ್ಲಾ ಡಿಲೀಟ್ ಮಾಡಿಸಿದ್ದೆ. ಆದರೂ ಅವನು ಅವಳನ್ನ ಹುಡುಕಿಕೊಂಡು ಚಿತ್ರದುರ್ಗಕ್ಕೆ ಹೋಗಿ ಕಿರುಕುಳ ನೀಡುತ್ತಿದ್ದ ಎಂದು ಅವರು ಆರೋಪಿಸಿದ್ದಾರೆ.
ಪತ್ನಿಯ ಅಕ್ಕನ ಮಗ ಈ ವಿಚಾರ ತಿಳಿದುಕೊಂಡು ಈ ರೀತಿ ಮಾಡಿದ್ದಾನೆ. ನಮ್ಮಮನೆಯಲ್ಲಿ ಸಂಬಂಧಿಕರ ಮದುವೆ ಇತ್ತು. ಮದುವೆಗೆ ಅಂತ ಕಾರು ರೆಡಿ ಮಾಡಿಕೊಂಡುಬಂದವನು ಈರೀತಿ ಮಾಡಿದ್ದಾನೆ. ನಮಗೆ ಪೊಲೀಸರು ಮನೆ ಬಳಿಗೆ ಬಂದ ಮೇಲೆ ಕೊಲೆಯಾಗಿದೆ ಅನ್ನೂ ವಿಚಾರ ಗೊತ್ತಾಗಿದೆ. ಈ ಕೊಲೆ ಕೇಸ್ನಲ್ಲಿ ನಮ್ಮದು, ನಮ್ಮ ಮಗಳದ್ದು ಯಾವುದೇ ಪಾತ್ರವಿಲ್ಲ. ನಾನು ಆ ಹುಡುಗನಿಗೆ ಯಾವುದೇವಾರ್ನಿಂಗ್ ನೀಡಿಲ್ಲ. ಅವನ ಮುಖ ಸಹ ನಾನು ನೋಡಿಲ್ಲ. ನಮಗೆ ಮಾಹಿತಿನೇ ಇಲ್ಲದೆ ಬಂದು ಈ ರೀತಿ ಮಾಡಿದ್ದಾನೆ. ನನ್ನ ಪತ್ನಿ ಸಹಈ ರೀತಿ ಮಾಡು ಅಂತ ಹೇಳಿಲ್ಲ. ಸಾಲ ಮಾಡಿ ನನ್ನ ಮಗಳನ್ನ ಓದಿಸುತ್ತಿದ್ದೀನಿ, ಕೊಲೆಬಗ್ಗೆ ನಮಗೆ ಮಾಹಿತಿ ಇಲ್ಲ. ನಾವೆಲ್ಲ ಮದುವೆ ಕಾರ್ಯದಲ್ಲಿ ನಿರತರಾಗಿದ್ದೇವು ಎಂದು ಶ್ರೀನಿವಾಸ್ ತಿಳಿಸಿದ್ದಾರೆ.