ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣಕ್ಕೆ ಬೇಡಿಕೆ ಇಟ್ಟ ದೇವೇಗೌಡರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು
, ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ರಾಜ್ಯದ ಹಿತದೃಷ್ಟಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣಕ್ಕೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

- Advertisement - 

ಜೊತೆಗೆ ತಮ್ಮ ಅವಧಿಯಲ್ಲಿ ಮಂಜೂರಾಗಿದ್ದ, ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪ್ರಯಾಣಿಕರ ಒತ್ತಡ ಹೆಚ್ಚಾಗಿ, ಮತ್ತೊಂದು ವಿಮಾನ ನಿಲ್ದಾಣ ಅವಶ್ಯಕತೆ ಇದೆ ಎಂಬುದನ್ನು ಸದನಕ್ಕೆ ಮನವರಿಕೆ ಮಾಡಿಕೊಟ್ಟರು. 

- Advertisement - 

ಈ ವೇಳೆ ಕೇಂದ್ರ ವಿಮಾನ ಖಾತೆ ಸಚಿವರಾದ ಎಂ.ಎನ್.ಕೆರಾಮ್ ಅವರು, ಕರ್ನಾಟಕ ಸರ್ಕಾರ ಜಾಗವನ್ನು ಗುರುತಿಸಿದರೆ, ನಾವು ಮತ್ತೊಂದು ವಿಮಾನ ನಿಲ್ದಾಣಕ್ಕೆ ಅನುಮತಿ ಕೊಡುತ್ತೇವೆ ಎಂದು ಸದನದಲ್ಲಿ ಉತ್ತರಿಸಿದರು.

 

- Advertisement - 

Share This Article
error: Content is protected !!
";