ಸಮ ಸಮಾಜ ನಿರ್ಮಾಣದ ಆಶಯದೊಂದಿಗೆ ಸಂವಿಧಾನ, ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ-ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂದು ಸಂವಿಧಾನ ಜಾರಿಯಾದಂತಹ ದಿನ
, ಒಕ್ಕೂಟ ವ್ಯವಸ್ಥೆ ಜಾರಿಯಾದ ಪವಿತ್ರ ದಿನ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮ ಸಮಾಜ ನಿರ್ಮಾಣದ ಆಶಯದೊಂದಿಗೆ ಸಂವಿಧಾನವನ್ನು ರಚಿಸಿದರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ‌ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

- Advertisement - 

ಸಂವಿಧಾನವನ್ನು ಇದೇ ದಿನದಂದು ಅಂಗೀಕರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ 100 ವರ್ಷಗಳನ್ನು ಪೂರೈಸಿದರೆ, ಸಂವಿಧಾನ ಜಾರಿಯಾಗಿ 75 ವರ್ಷಗಳು‌ತುಂಬಿದೆ. ಈ ಮಹತ್ವದ ಸಂದರ್ಭವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ‌ಸಮಾವೇಶ ನಡೆಸಲಾಯಿತು. ಈ ಕಾರ್ಯಕ್ರಮವನ್ನು ರಾಜ್ಯದೆಲ್ಲೆಡೆ ವರ್ಷಾದ್ಯಂತ ನಡೆಸಲು ನಿರ್ಧರಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.

- Advertisement - 

ಈ ವೇಳೆ ಮುಖ್ಯಮಂತ್ರಿ, ಡಿಸಿಎಂ ಡಿ.ಕೆ ಶಿವಕುಮಾರ್, ಸೇರಿದಂತೆ ಮತ್ತಿತರ ನಾಯಕರು ಜೊತೆಗಿದ್ದರು. ಇದೇ ವೇಳೆ ಎಲ್ಲ ಕಾಂಗ್ರೆಸ್ ನಾಯಕರು ಸಂವಿಧಾನ ಜಾರಿಯಾದ ಈ ಐತಿಹಾಸಿಕ ದಿನದಂದು ಅದರ ಮೌಲ್ಯಗಳನ್ನು ಎತ್ತಿಹಿಡಿಯುವ ಪಣ ತೊಡೋಣ ಎಂದು ಕರೆ ನೀಡಿದರು.

 

Share This Article
error: Content is protected !!
";