ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಸೆಪ್ಟೆಂಬರ್ 09 ರಂದು ಸಂಜೆ 6.51ರಿಂದ 7.30ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದೆ.
ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗಗಳ ನಿರ್ವಹಣೆ ವಿಷಯದ ಕುರಿತು ಕಡೂರ್ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಜಯದೇವ ಅವರು ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡಲಿದ್ದಾರೆ.
ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 ಹಾಗೂ ವಾಟ್ಸಪ್ ಮೆಸೇಜ್ ಮಾಡಲು ದೂರವಾಣಿ ಸಂಖ್ಯೆ: 9481572600 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

