ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ಸಾಂಸ್ಥಿಕ ಚುನಾವಣೆ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಪಕ್ಷದ ಕೇಂದ್ರ ಕಚೇರಿಜೆ.ಪಿ.ಭವನದಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಮುಖಂಡರು,
ಪದಾಧಿಕಾರಿಗಳು, ವಾರ್ಡ್ ಅಧ್ಯಕ್ಷರು ಹಾಗೂ ಪ್ರಮುಖರ ಸಭೆಯನ್ನು ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಚ್ಎಂ ರಮೇಶ್ ಗೌಡರ ಅಧ್ಯಕ್ಷತೆಯಲ್ಲಿ ನಡೆಸಿ, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಯಿತು.
ಈ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯಾದ ಶೈಲ ಸಂತೋಜೀರಾವ್, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಹಾಲಿ ಅಧ್ಯಕ್ಷ ಎಂ ಚಂದ್ರೇಗೌಡ, ಬೆಂಗಳೂರು ನಗರ ಕಾರ್ಯಾಧ್ಯಕ್ಷ ಕೆ ವಿ ನಾರಾಯಣಸ್ವಾಮಿ, ಮಹಾಪ್ರದಾನ ಕಾರ್ಯದರ್ಶಿ ಎಸ್ ರಮೇಶ, ಮುಖಂಡರಾದ ಹನುಮಂತರಾಯ, ಕೆಎನ್ ದಯಾನಂದ್ ಮೂರ್ತಿ, ಜಯಲಕ್ಷ್ಮಿ ಕಾರ್ತಿಕ್ ರವರು ಸೇರಿದಂತೆ ಹಲವರು ಭಾಗವಹಿಸಿದ್ದರು.