ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾವಣಗೆರೆ ನಗರದ ಆರಾಧ್ಯ ದೇವತೆ ಶ್ರೀ ದುರ್ಗಾಂಭಿಕಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಕೈಗೊಳ್ಳಲಾಗಿರುವ ಸಿದ್ಧತೆಗಳು ಹಾಗೂ ವ್ಯವಸ್ಥೆಗಳ ಕುರಿತು ಮಾಹಿತಿಯನ್ನು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪಡೆದುಕೊಂಡರು.
ಈ ವೇಳೆ ಭಕ್ತರಿಗೆ ದೇವಿಯ ದರ್ಶನ ಮಾಡಲು ಸೂಕ್ತ ವ್ಯವಸ್ಥೆ ಮಾಡುವ ಕುರಿತು ಅವರು ಕಟ್ಟು ನಿಟ್ಟಿನ ಸಲಹೆ ಸೂಚನೆ ನೀಡಿದರು.

