ಆರ್​​ಎಸ್​​ಎಸ್ ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

News Desk

ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​​ಎಸ್​​ಎಸ್)ದ ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗುರುಮಠಕಲ್​ನಲ್ಲಿ ಅಕ್ಟೋಬರ್​ 31ರಂದು ಆರ್​​ಎಸ್​​ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಖರ್ಗೆ ಕೋಟೆಯಲ್ಲಿ ಆರ್​​ಎಸ್​​ಎಸ್ ಗಣವೇಷಧಾರಿಗಳು ಪಥಸಂಚಲನ ನಡೆಯಲಿದೆ.

- Advertisement - 

ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ ಗುರು ಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್​​ನಿಂದ ಪಥಸಂಚಲನ ಕೈಗೊಳ್ಳಲು ಅನುಮತಿ ನೀಡಿ ಆದೇಶ ಮಾಡಿದ್ದಾರೆ.
ಸಾಮ್ರಾಟ್ ವೃತ್ತ
, ಬಸವೇಶ್ವರ ವೃತ್ತ , ಹನುಮಾನ್ ದೇವಸ್ಥಾನ ಹಾಗೂ ಕುಂಬಾರವಾಡಿ ಸೇರಿ‌ಹಲವೆಡೆ ಪಥಸಂಚಲನ ಸಂಚರಿಸಲಿದೆ.

ಜಿಲ್ಲಾಡಳಿತ ಹಾಕಿರುವ ಷರತ್ತುಗಳು:
ಯಾದಗಿರಿ ಜಿಲ್ಲಾಡಳಿತವು ಅನುಮತಿ ಕೊಟ್ಟಿರುವ ಆರ್​​ಎಸ್​​ಎಸ್ ಪಥಸಂಚಲನಕ್ಕೆ ಹತ್ತು ಷರತ್ತುಗಳನ್ನು ವಿಧಿಸಲಾಗಿದೆ.

- Advertisement - 

ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ ಅನುಮತಿ ನೀಡಲಾಗಿದೆ.

Share This Article
error: Content is protected !!
";