ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣಾ ಅಧಿಸೂಚನೆ ಹಿಂಪಡೆದ ಚುನಾವಣಾಧಿಕಾರಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇದರ ಆಡಳಿತ ಮಂಡಳಿಗೆ ಚುನಾವಣೆ ಮೂಲಕ ಪದಾಧಿಕಾರಿಗಳ ಆಯ್ಕೆ ಮಾಡಲು ಹೊರಡಿಸಲಾಗಿದ್ದ ಚುನಾವಣಾ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇದರ ಆಡಳಿತ ಮಂಡಳಿಯ ಅಧಿಕಾರ ಅವಧಿ ಸೆಪ್ಟೆಂಬರ್-29ಕ್ಕೆ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಆಡಳಿತ ಮಂಡಳಿಗೆ ಚುನಾವಣೆಯನ್ನು ಸೆ.13ರಂದು ನಡೆಸಲು ಆಯೋಗದಿಂದ ಅನುಮತಿ ನೀಡಲಾಗಿತ್ತು. ಆದರೆ ಕೆಲ ಮತದಾರರು ನ್ಯಾಯಲಯಕ್ಕೆ ಪ್ರಕರಣವನ್ನು ಕೊಂಡೊಯ್ದರಿಂದಾಗಿ ಇನ್ನೂ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥ ಆಗಿಲ್ಲದ ಕಾರಣ ಚುನಾವಣಾ ಅಧಿಸೂಚನೆ ಹಿಂಪಡೆಯಲಾಗಿದೆ.

- Advertisement - 

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಮತ್ತು ನಿಯಮಗಳು 1960 ರ ನಿಯಮ 14(1) ರಂತೆ ಚುನಾವಣೆಯ ಅಧಿಸೂಚನೆಯನ್ನು ಕಳೆದ ಜೂನ್-30ಕ್ಕೆ ಹೊರಡಿಸಲಾಗಿದ್ದು, ಕಾರಣಾಂತಗಳಿಂದ ಚುನಾವಣೆ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";