ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವು ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಕೆ ಕವಿತಾ ಸೇರಿದಂತೆ 23 ಮಂದಿಯ ವಿರುದ್ಧ ಇದ್ದ ಪ್ರವರಣವನ್ನು ವಜಾ ಮಾಡಿದ್ದು ಇದು ಸತ್ಯಕ್ಕೆ ಸಿಕ್ಕಿರುವ ಜಯ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಜಗದೀಶ್ ಹೇಳಿದರು.
ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನ್ಯಾಯಾಧೀಶ ಜಿತೇಂದರ್ ಸಿಂಗ್ ಅವರು ಸುಮಾರು 598 ಪುಟಗಳ ಸುದೀರ್ಘ ತೀರ್ಪು ಹೊರಡಿಸಿ, ಕೇಜ್ರಿವಾಲ್ ವಿರುದ್ಧದ ಆರೋಪಗಳು ಸಹ-ಆರೋಪಿಗಳ ಅಥವಾ ಸಾಕ್ಷಿಗಳ ಹೇಳಿಕೆಗಳನ್ನು ಮಾತ್ರವೇ ಆಧರಿಸಿವೆ, ಆದರೆ ಅವರನ್ನು ಯಾವುದೇ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತು ಮಾಡುವ ಸ್ವತಂತ್ರ ಪುರಾವೆಗಳ ಕೊರತೆಯಿದೆ ಎಂದು ಹೇಳಿದ್ದಾರೆ ಎಂದು ಜಗದೀಶ್ ತಿಳಿಸಿದರು.
ನ್ಯಾಯಾಲಯವು ತನಿಖಾ ಸಂಸ್ಥೆಯ ಅನೇಕ ಲೋಪದೋಷಗಳನ್ನು ಎತ್ತಿ ತೋರಿಸಿ, ಸಿಬಿಐ ವಿರುದ್ಧ ಛಾಟಿ ಬೀಸಿದೆ. ಆರೋಪಿಗಳ ವಿರುದ್ಧ ವಿಚಾರಣೆ ನಡೆಸಲು ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಅಗತ್ಯವಿರುವ ‘ಗಂಭೀರ ಅನುಮಾನ’ವಿರಲಿ, ಕನಿಷ್ಠ ಮಟ್ಟದ ‘ಮೇಲ್ನೋಟದ ಅನುಮಾನ’ವನ್ನೂ ಎತ್ತಿ ತೋರಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದ್ದು ಸ್ವಾಗತಾರ್ಹವಾಗಿದೆ ಎಂದು ಅವರು ತಿಳಿಸಿದರು.
ಸಿಬಿಐ ತನಿಖಾ ಸಂಸ್ಥೆಯ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ವರ್ತಿಸುವ ಮೂಲಕ ನಾವು ಮಾಡಿದ್ದೆ ಸರಿ ಎನ್ನುವ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ ಎಂದು ಜಗದೀಶ್ ತಿಳಿಸಿದರು.
ಪ್ರಕರಣದಲ್ಲಿ ಬಿಡುಗಡೆಯಾಗಿರುವ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ್ ಕ್ರೇಜಿವಾಲ ಅವರ ಬಿಡುಗಡೆಯಿಂದಾಗಿ ಕಾರ್ಯಕರ್ತರು, ಮುಖಂಡರಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ ಎಂದು ಜಿಲ್ಲಾಧ್ಯಕ್ಷ ಜಗದೀಶ್ ತಿಳಿಸಿದರು.
ಸುದ್ದಿಗೋಷ್ಠಿ ಆಮ್ ಆದ್ಮಿ ಪಾರ್ಟಿಯ ಜಂಟಿ ಕಾರ್ಯದರ್ಶಿಗಳಾದ ರಾಮಣ್ಣ, ರವಿಕುಮಾರ್, ಲೋಕೇಶ್, ಕುಬೇರ್ ನಾಯ್ಕ್, ಮಹಿಳಾ ಜಿಲ್ಲಾಧ್ಯಕ್ಷ ಜ್ಯೋತಿ, ವಿನೋದಮ್ಮ ಮತ್ತಿತರರು ಇದ್ದರು.

