ಹೆಸರಿಗಷ್ಟೇ ಶುದ್ಧ ಕುಡಿಯುವ ನೀರಿನ ಘಟಕ| ನೀರು ಮಾತ್ರ ಕೇಳ್ಬೇಡಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಹಾಗೂ ಮ್ಯಾಸರ ಹಟ್ಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿ ಹಲವು ವರ್ಷಗಳೆ ಕಳೆದಿದೆ. ಆದರೆ ಹನಿ ನೀರು ಮಾತ್ರ ಕೇಳ್ಬೇಡಿ. ಇಲ್ಲಿನ ಜನರಿಗೆ ಹೇಳಿಕೊಳ್ಳೋಕೆ ಮಾತ್ರ ಇದು ಶುದ್ಧ ಕುಡಿಯುವ ಘಟಕ ನೀರಿಗೆ ಮಾತ್ರ ಪಕ್ಕದ ಊರುಗಳಿಗೋಗಿ ತರಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರ ಸಾರ್ವಜನಿಕರಿಗೆ ಉಪಯೋಗವಾಗಲಿ ಎನ್ನುವ ದೃಷ್ಠಿಯಿಂದ ಲಕ್ಷಾಂತರ ರೂ. ಖರ್ಚು ಮಾಡಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಿಸಿದೆ. ಆದರೆ ಜನರಿಗೆ ಕುಡಿಯಲು ನೀರು ಕೊಡದೆ ಘಟಕವನ್ನು ಪ್ರದರ್ಶನದ ವಸ್ತುವಂತೆ ಇರಿಸಲಾಗಿದೆ.

- Advertisement - 

ವಸ್ತು ಪ್ರದರ್ಶನದ ಅವಶೇಷಗಳಲ್ಲಿರುವ ಕುಡಿಯುವ ನೀರಿನ ಘಟಕದ ಬಾಗಿಲು, ಕಿಟಕಿ ಕಿತ್ತು ಹೋಗಿವೆ. ಶುದ್ಧ ಕುಡಿಯುವ ನೀರಿನ ಘಟಕದ ಒಳಗಿನ ಯಂತ್ರೋಪಕರಣಗಳ ಬಿಡಿ ಭಾಗಗಳು ಕಣ್ಮರೆಯಾಗುವ ಹಂತ ತಲುಪಿದೆ. ಆದರೂ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯಾರಂಭದ ಲಕ್ಷಣವೇ ಕಾಣುತ್ತಿಲ್ಲ ಎನ್ನುವ ಕೊರಗು ಜುಮ್ಮೋಬನಹಳ್ಳಿ ಹಾಗೂ ಮ್ಯಾಸರ ಹಟ್ಟಿ ಗ್ರಾಮದ ಸಾರ್ವಜನಿಕರದಾಗಿದೆ.

ಜನರ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಲಕ್ಷಾಂತರ ರೂ. ವ್ಯಯಿಸಿ ಶುದ್ದ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗಿದೆ. ಆದರೆ ವಿವಿಧ ಕಾರಣಗಳಿಂದ ಇದು ನನೆಗುದಿಗೆ ಬಿದ್ದಿದೆ. ಕುಡಿಯುವ ನೀರಿನ ಘಟಕದಲ್ಲಿರುವ, ಸಾಮಾಗ್ರಿಗಳು ತುಕ್ಕು ಹಿಡಿದು ಮುರಿದು ಬೀಳುವ ಹಂತದಲ್ಲಿವೆ.

- Advertisement - 

ಸಂಬಂಧಪಟ್ಟ ಅಧಿಕಾರಿಗಳು  ಈವರೆಗೂ ಗಮನ ಹರಿಸದೆ ನಿರ್ಲಕ್ಷ ತೋರಿದ್ದಾರೆ. ಆದಷ್ಟು ಶೀಘ್ರ ದುರಸ್ತಿ ಮಾಡಿದರೆ ಒಳ್ಳೆಯದು ಎಂದು ಸಾರ್ವಜನಿಕರು ಮಾಧ್ಯಮದ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ ಸಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

 

Share This Article
error: Content is protected !!
";