ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ವಜೀರ್-ಇ-ಅಲ್ಲ ನಾ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರು ಹಿಂದೂಗಳನ್ನು ಟಾರ್ಗೆಟ್ ಮಾಡಿ ರಾಜಾರೋಷವಾಗಿ ಕೊಲೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಮಾಡಲು ಮತಾಂಧರು ಹೊಂಚು ಹಾಕಿ ಕೂತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆಯ ಕಾರಣದಿಂದಲೇ ಇಂದು ಮತಾಂಧರು ಈ ಪರಿ ಬಾಲ ಬಿಚ್ಚಲು ಸಾಧ್ಯ ಎಂದು ಬಿಜೆಪಿ ಕಿಡಿಕಾರಿದೆ.
ಆಕಸ್ಮಿಕ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರೇ, ಮತ್ತೆ ಹಿಂದೂ ಕಾರ್ಯಕರ್ತರಿಗೆ ಧಮ್ಕಿ ಬಂದಿದೆ. ಕಟ್ಟೆಚ್ಚರವಹಿಸಿ ಕ್ರಮ ತೆಗೆದುಕೊಳ್ಳಿ ನಿಮ್ಮ ಒಲೈಕೆಗಾಗಿ ಮತ್ತೆ ಹಿಂದೂಗಳ ಬಲಿಕೊಡಬೇಡಿ ಎಂದು ಬಿಜೆಪಿ ಆಗ್ರಹ ಮಾಡಿದೆ.