ಬೆಂಗಳೂರನ್ನು ಬಹಳ ಮೆಚ್ಚಿಕೊಂಡಿದ್ದ ಡಾ.ಮನಮೋಹನ್ ಸಿಂಗ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿಗೂ ಮಾಜಿ ಪ್ರಧಾನಿ ಮನಮೋಹನ್​​​ ಸಿಂಗ್ ಅವರಿಗೂ ತುಂಬಾ ಒಟನಾಟವಿಟ್ಟು.​ ಬೆಂಗಳೂರನ್ನು ಮನಮೋಹನ್​​​ ಸಿಂಗ್ ಬಹಳ ಮೆಚ್ಚಿಕೊಂಡಿದ್ದರು. ಬೆಂಗಳೂರಿಗೆ ಹಲವು ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವುದರಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಮರಿಸಿದ್ದಾರೆ.

- Advertisement - 

ಮಾಜಿ ಪ್ರಧಾನಿಗಳ ನಿಧನಕ್ಕೆ ಸಂತಾಪ ಸೂಚಿಸಿರುವ ಅವರು, ಕರ್ನಾಟಕದಲ್ಲಿ 2008ರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವಿತ್ತು. ಆಗ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕೇಂದ್ರದಲ್ಲಿ ಡಾ.ಮನಮೋಹನ್ ಸಿಂಗ್​ ಪ್ರಧಾನ ಮಂತ್ರಿಯಾಗಿದ್ದರು. 2008ರ ಮೇ ತಿಂಗಳಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಿಂಗ್ ಉದ್ಘಾಟಿಸಿದ್ದರು ಎಂದು ಶಿವಕುಮಾರ್ ಸ್ಮರಿಸಿದ್ದಾರೆ.

- Advertisement - 

ನಗರದ ಮೊದಲ ಮೆಟ್ರೋ ರೈಲಿಗೆ ಚಾಲನೆ ನೀಡಿದ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. 2011ರಲ್ಲಿ ಬೈಯಪ್ಪನಹಳ್ಳಿಯಿಂದ ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಯೋಜನೆಗೆ ಚಾಲನೆ ನೀಡಿದ್ದರು. ಆ ಸಂದರ್ಭದಲ್ಲಿ ಬೆಂಗಳೂರಿನ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನು ಮಾಡಿದ ಮನಮೋಹನ್ ಸಿಂಗ್, ರಾಷ್ಟ್ರದ ಪ್ರತಿಯೊಂದು ನಗರವು ಬೆಂಗಳೂರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೆಜ್ಜೆಯಿಡುತ್ತಿದೆ. ಈ ನಗರದ ಹಿಂದಿನ ಯಶಸ್ಸನ್ನು ಗಮನದಲ್ಲಿಟ್ಟುಕೊಂಡೇ ದೃಢ, ಸಕಾರಾತ್ಮಕ ಹೆಜ್ಜೆಗಳನ್ನಿಡುತ್ತಿವೆ ಎಂದರು.

ಬೆಂಗಳೂರಿನಲ್ಲಿರುವ ಡಾ.ಬಿ.ಆರ್​​.ಅಂಬೇಡ್ಕರ್​ ಸ್ಕೂಲ್​ ಆಫ್​​ ಎಕನಾಮಿಕ್ಸ್​​ ವಿಶ್ವವಿದ್ಯಾಲಯದ ಅಕಾಡೆಮಿಕ್​ ಸೆಷನ್​ಗಳನ್ನು 2017ರಲ್ಲಿ ಉದ್ಘಾಟಿಸಿದರು. ಪಿ.ವಿ.ನರಸಿಂಹರಾವ್​​​ ಕೇಂದ್ರದಲ್ಲಿ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರು, ನರಸಿಂಹರಾವ್ ಅವರಿಗೆ ಆರ್ಥಿಕ ಸಲಹೆಗಾರರಾಗಿದ್ದರು. 1991ರಲ್ಲಿ ಬೆಂಗಳೂರಿನ ಇಂಡಿಯನ್​​​ ಇನ್ಸ್​​​ಟ್ಯೂಟ್​​​ ಆಫ್​ ಮ್ಯಾನೇಜ್​ಮೆಂಟ್​​ನ 16ನೇ ಘಟಿಕೋತ್ಸವದಲ್ಲಿ ಮನಮೋಹನ್​ ಸಿಂಗ್​ ಅವರು ಭಾರತದ ಕುರಿತ ತಮ್ಮ ಆರ್ಥಿಕ ದೃಷ್ಟಿಕೋನದ ಬಗ್ಗೆ ಭಾಷಣ ಮಾಡಿದ್ದರು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

- Advertisement - 

ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಮನಮೋಹನ್ ಸಿಂಗ್ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಹಲವು ಫ್ಲೈಓವರ್‌ಗಳು ಸಹ ಸಿಂಗ್​ ಅವರು ನೀಡಿದ ಕೊಡುಗೆಗಳಾಗಿವೆ. ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲ ಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತಿದ್ದು ಇದೇ ಮನಮೋಹನ್ ಸಿಂಗ್ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

 

Share This Article
error: Content is protected !!
";