ಅರಣ್ಯ ಬೆಂಕಿ ತಡೆಗೆ ಡ್ರೋನ್ ಕಣ್ಗಾವಲು

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟಿದ್ದು ಇದರಿಂದ ನೂರಾರು ಎಕರೆ ಅರಣ್ಯ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರ ದ್ರೋಣ ಪರ್ವತದಲ್ಲಿ ಸಂಭವಿಸಿದೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಸೀತಾಳಯ್ಯನ ಗಿರಿ ಗಾಳಿಕೆರೆ ಭಾಗದ 6 ಕಡೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕಿಡಿಗೇಡಿಗಳು ಇಟ್ಟ ಬೆಂಕಿಗೆ ಇಡೀ ಗುಡ್ಡವೇ ಉರಿದು ಭಸ್ಮವಾಗಿದೆ.

- Advertisement - 

ಅರಣ್ಯ ಇಲಾಖೆ ಕಿಡಿಗೇಡಿಗಳ ಕೃತ್ಯ ತಡೆಯಲು ಡ್ರೋನ್ ಮೊರೆ ಹೋಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್ ಮೂಲಕ ಅರಣ್ಯ ಇಲಾಖೆ ಕಣ್ಣಿಟ್ಟಿದೆ. ಕಳೆದ ಒಂದು ವಾದದಿಂದ ನಿರಂತರವಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಎಫ್​​ಐಆರ್ ದಾಖಲಾದರೂ ಕಿಡಿಗೇಡಿಗಳ ಕೃತ್ಯ ಮುಂದುವರೆದಿರುವುದು ಆತಂಕಕ್ಕೆ ಕಾರಣವಾಗಿದೆ.

 

- Advertisement - 

Share This Article
error: Content is protected !!
";