ಗೊಲ್ಲಹಳ್ಳಿ ಜೆಟ್ ಸಿಬಿಎಸ್ಇ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ ದಸರಾ ಉತ್ಸವ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಜೆಟ್ ಸಿಬಿಎಸ್ಇ ಶಾಲೆಯಲ್ಲಿ ನಾಡ ಹಬ್ಬ ದಸರಾ ಉತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ನವ ದುರ್ಗಿಯರ ನೃತ್ಯ ನೋಡುಗರ ಗಮನ ಸೆಳೆಯಿತು. ಗೊಂಬೆ ಪ್ರದರ್ಶನ ಏರ್ಪಡಿಸಲಾಗಿತ್ತು.

- Advertisement - 

ಹಿರಿಯ ಪತ್ರಕರ್ತ ಹಾಗೂ ಜಾಗೃತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಮಾತನಾಡಿ ಕನ್ನಡ ನಾಡು ನುಡಿ ಸಂಸ್ಕೃತಿ ಬಿಂಬಿಸುವ ನಾಡ ಹಬ್ಬ ದಸರಾ ಮಕ್ಕಳ ಪಾಲಿಗೆ ಜ್ಞಾನದ ಬೆಳಕಾಗಿ ಹೊರ ಹೊಮ್ಮಲಿ ಎಂದು ಹೇಳಿದರು.

- Advertisement - 

ನಾಡಿನ ಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಚಿಗುರೋಡೆಯಲು ಇಂತಹ ಉತ್ಸವಗಳು ಅತ್ಯಗತ್ಯ ಎಂದು ಹೇಳಿದರು.

ಸಮಾಜ ಸೇವಕಿ ಶಶಿಕಲಾ ರವಿಶಂಕರ್ ಉದ್ಘಾಟಿಸಿ ಮಾತನಾಡಿ ಶಾಲೆಗಳಲ್ಲಿ ದಸರಾ ಹಬ್ಬಗಳನ್ನು ಆಚರಿಸುವುದರಿಂದ ಮುಂದಿನ ಪೀಳಿಗೆಗೆ ಸಾಂಸ್ಕೃತಿಕ ವಾರಸುದಾರರನ್ನಾಗಿ ರೂಪಿಸಬೇಕು ಎಂದು ಹೇಳಿದರು.

- Advertisement - 

ಸಮಾಜ ಸೇವಕಿ ಲತಾ ರವೀಂದ್ರಪ್ಪ ಮುಖ್ಯ ಅತಿಥಿಗಳಾಗಿದ್ದರು.

ಜಾಗೃತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎನ್.ಗಿರಿಜಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಷಣ್ಮುಗ ಸುಂದರಂ ಸ್ವಾಗತಿಸಿದರು.

Share This Article
error: Content is protected !!
";