ಪೌಷ್ಠಿಕ ಆಹಾರ ಸೇವಿಸಿ ರಕ್ತಹೀನತೆ ತೊಲಗಿಸಿ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಪೌಷ್ಠಿಕ ಆಹಾರ ಸೇವಿಸಿ
, ರಕ್ತ ಹೀನತೆ ತೊಲಗಿಸಿ ಎಂದು ಐಸಿಎಂಆರ್ ಸಂಯೋಜಕ ಓ.ಉಮೇಶ್ ಹೇಳಿದರು.

ಹಿರಿಯೂರು ತಾಲ್ಲೂಕಿನ ಯರಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸೊಂಡೆಕೆರೆ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಪೌಷ್ಠಿಕ ಆಹಾರ ಶಿಬಿರದಲ್ಲಿ ಅವರು ಮಾತನಾಡಿದರು.

- Advertisement - 

ಆರೋಗ್ಯ ಭಾಗ್ಯಕ್ಕಿಂತ ಬೇರೆ ಯಾವ ಭಾಗ್ಯನೂ ಇಲ್ಲ. ಪೌಷ್ಠಿಕ ಆಹಾರವನ್ನು ಸೇವಿಸಿ ರಕ್ತಹೀನತೆ ತಡೆಗಟ್ಟಿ ಎಂದು ತಿಳಿಸಿದ ಅವರು, ಎದೆಹಾಲಿನ ಮಹತ್ವವನ್ನು ಹಾಡಿನ ಮೂಲಕ ಅರಿವು ಮೂಡಿಸಿದರು.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮದುವೆ ಮಾಡುವುದು ಕಾನೂನು ಬಾಹಿರ. ಈ ವಯಸ್ಸಿನಲ್ಲಿ ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಿದ್ದರಿರುವುದಿಲ್ಲ. ಇದರಿಂದ ತಾಯಿ ಮರಣ ಮತ್ತು ಶಿಶು ಮರಣ ಸಂಭವಿಸುತ್ತದೆ ಎಂದು ತಿಳಿಸಿದರು. 

- Advertisement - 

ಈ ಸಂದರ್ಭದಲ್ಲಿ ಅರೋಗ್ಯ ಇಲಾಖೆಯ ಮೊಹಮದ್ ಅನೀಫ್, ತಿಪ್ಪೇಸ್ವಾಮಿ, ನಾಗವೇಣಿ, ಶೃತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಭಾಗವಹಿಸಿದ್ದರು.

 

Share This Article
error: Content is protected !!
";