ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕೈಗಾರಿಕಾ ವಿಸ್ತರಣೆ, ಉದ್ಯೋಗ ಸೃಷ್ಟಿ ಮತ್ತು ಹೂಡಿಕೆ ಆಕರ್ಷಣೆಗೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಕೈಗೊಂಡಿರುವ ದಾವೋಸ್ ಪ್ರವಾಸ ಯಶಸ್ವಿಯಾಗಿ ಸಾಗುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಕೋಕಾ-ಕೋಲಾ ಕಂಪೆನಿಯ ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಸೂಕ್ತವಾಗಿರುವುದನ್ನು ಕಂಪೆನಿಯ ಮುಖ್ಯಸ್ಥರಿಗೆ ಮನವರಿಕೆ ಮಾಡಿಕೊಡಲಾಗಿದೆ. ಘ
ಟಕ ಸ್ಥಾಪನೆಯಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಸಾವಿರಾರು ಉದ್ಯೋಗಗಳಿಗೆ ದಾರಿ ತೆರೆದು, ಸ್ಥಳೀಯ ಆರ್ಥಿಕತೆಗೆ ಮತ್ತಷ್ಟು ವೇಗದೊರೆಯಲಿದೆ. ಹೂಡಿಕೆ–ಉದ್ಯೋಗ–ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇದು ನಮ್ಮ ಆಡಳಿತದ ಸ್ಪಷ್ಟ ಆದ್ಯತೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

