ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ನಿವೃತ್ತ ಶಿಕ್ಷಕ ಟಿ.ತಿಮ್ಮಯ್ಯ ರವರ ಅಳಿಯ ಕೃಷಿಕ ಎಲ್. ಶಿವಣ್ಣ(65) ಹೃದಯಾಘಾತದಿಂದ ಶನಿವಾರ ಕೋವೇರಹಟ್ಟಿ ಗ್ರಾಮದಲ್ಲಿ ನಿಧನರಾದರು.
ಅವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ. ಶನಿವಾರ ಸಂಜೆ 5 ಗಂಟೆಗೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೋವೇರಹಟ್ಟಿ ಗ್ರಾಮದ ಕೃಷಿಕ ಎಲ್. ಶಿವಣ್ಣ ಇನ್ನಿಲ್ಲ

