ಉದ್ಯೋಗ ಖಾತ್ರಿ ಸದ್ಬಳಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉದ್ಯೋಗ ಖಾತ್ರಿ ಯೋಜನೆ ಇದು ಗ್ರಾಮೀಣ ಪ್ರಾಂತ್ಯದ ಕಾರ್ಮಿಕರ ಬದುಕಿನ ಆತ್ಮಬಲದ ಯೋಜನೆ. ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ಪ್ರಾರಂಭವಾದ ಈ ಯೋಜನೆ ಗ್ರಾಮೀಣ ಪ್ರಾಂತ್ಯದ ಅಭಿವೃದ್ಧಿಗೆ ಪೂರಕವಾಗಿ ಕೂಲಿ ಕಾರ್ಮಿಕರ ಬದುಕಿಗೆ ಬೆಂಬಲವಾಗಿ ನಿಂತಿದೆ.

ಗ್ರಾಮೀಣ ಪ್ರಾಂತ್ಯದ ಕಾರ್ಮಿಕರಿಗೆ ವರ್ಷದಲ್ಲಿ 90 ದಿನ ಕೆಲಸ ಕೊಟ್ಟು ಅವರ ಬದುಕಿಗೆ ಆಸರೆ ನೀಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.

ಡಾ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಸದ್ಬಳಕೆಯಿಂದ ಗ್ರಾಮೀಣ ಪ್ರಾಂತ್ಯಗಳು ಅಭಿವೃದ್ಧಿ ಹೊಂದಿವೆ ಹಾಗೂ ಜನರ ಬದುಕಿಗೆ ಆಸರೆಯಾಗಿರುವ ವಿಚಾರ ಬಹಳಷ್ಟು ಪ್ರಾಮುಖ್ಯತೆ ಪಡೆದಿದೆ.

 ಹಳೆ ಮೈಸೂರು ಪ್ರಾಂತ್ಯದ 9 ಜಿಲ್ಲೆಯ ಪೈಕಿ ಚಿತ್ರದುರ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ನರೇಗಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆ ವಿಚಾರವನ್ನು ಸದ್ಬಳಕೆ ಮಾಡಿಕೊಂಡ ಪಂಚಾಯಿತಿ ಆಡಳಿತ ಮಂಡಳಿಗೆ ಕಾಂಗ್ರೆಸ್ ಮುಖಂಡ ರಘು ಗೌಡ ಅಭಿನಂದನೆ ತಿಳಿಸಿದ್ದಾರೆ.

 

 

Share This Article
error: Content is protected !!
";