ಅಂತಾರಾಷ್ಟ್ರೀಯ ಆಟೋಮೋಟಿವ್​ ಟೆಕ್ನಾಲಜಿ ಕೇಂದ್ರ ಸ್ಥಾಪನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತಾರಾಷ್ಟ್ರೀಯ ಆಟೋಮೋಟಿವ್​ ಟೆಕ್ನಾಲಜಿ ಕೇಂದ್ರ(ಐಕ್ಯಾಟ್)​ ಮೂರನೇ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರು ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಮುಂಚೂಣಿಯಲ್ಲಿದೆ. ಆಟೋಮೊಬೈಲ್ ಕ್ಷೇತ್ರದ ಹಬ್​ ಆಗಿಯೂ ಬೆಳೆಯುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ ಐಕ್ಯಾಟ್​ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಶುರುಮಾಡುವುದಾಗಿ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಐಕ್ಯಾಟ್​ ಸ್ಥಾಪನೆ ಮಾಡುವುದರಿಂದ ಎಲೆಕ್ಟ್ರಿಕ್​ ವಾಹನ ತಂತ್ರಜ್ಞಾನ, ಸಾಫ್ಟ್​ವೇರ್​ ನಿಯಂತ್ರಿತ ವಾಹನಗಳು, ಸ್ವಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯ ದೃಷ್ಟಿಯಲ್ಲಿ ಐಕ್ಯಾಟ್​ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಐಕ್ಯಾಟ್​ ಕೇಂದ್ರ ಸ್ಥಾಪನೆ ಮಾಡುವುದರಿಂದ ಅಕ್ಕಪಕ್ಕದ ರಾಜ್ಯಗಳಿಗೂ ಅನುಕೂಲವಾಗಿದೆ. ಆಟೋಮೊಬೈಲ್​ ಆವಿಷ್ಕಾರಕ್ಕೆ ಉತ್ತೇಜನ ದೊರೆಯಲಿದೆ ಮತ್ತು ಐಕ್ಯಾಟ್​ ಸ್ಥಾಪನೆಯಿಂದ ಮುಂದಿನ ಪೀಳಿಗೆಗೆ ಆಟೋ ಮೊಬೈಲ್​ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಕ್ಕೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂದು ಹೆಚ್ ಡಿಕೆ ತಿಳಿಸಿದರು.

ಇದಕ್ಕೂ ಮುನ್ನ ಗುರುಗ್ರಾಮ್ ಬಳಿಯ ಮನೇಸರ್‌ನಲ್ಲಿರುವ ಐಸಿಎಟಿಯ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಹೆಚ್​ಡಿ ಕುಮಾರಸ್ವಾಮಿ, ಅವುಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 

- Advertisement -  - Advertisement -  - Advertisement - 
Share This Article
error: Content is protected !!
";