ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ವಾಯುಪಡೆ ಮಾಜಿ ಅಧಿಕಾರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಯುಪಡೆಯ ಮಾಜಿ ಅಧಿಕಾರಿ ಬಿಹಾರ ಮೂಲದ ಅನಿಲ್ ಕುಮಾರ್ ಪಾಂಡೆ (
49) ಅವರು ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಮೆಟ್ರೋ ಸಿಬ್ಬಂದಿಗಳು ಆ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ನಮ್ಮ ಮೆಟ್ರೋ ಹಸಿರು ಮಾರ್ಗದ ಜಾಲಹಳ್ಳಿ ನಿಲ್ದಾಣದಲ್ಲಿ ನಡೆದಿದೆ.

ಸೆಂಟ್ರಲ್ ಸಿಲ್ಕ್ ಇನ್ಸ್​ಟಿಟ್ಯೂಟ್​ನಿಂದ ಮಾದಾವರ ಮಾರ್ಗವಾಗಿ ಸಂಚರಿಸುತ್ತಿದ್ದ ಮೆಟ್ರೋ ರೈಲಿಗೆ ಇಂದು ಬೆಳಗ್ಗೆ 10:25ರ ಸುಮಾರಿಗೆ ಜಾಲಹಳ್ಳಿ ನಿಲ್ದಾಣ ತಲುಪುತ್ತಿದ್ದಂತೆ ಅನಿಲ್ ಕುಮಾರ್ ಪಾಂಡೆ ಹಳಿ ಮೇಲೆ ಜಿಗಿದಿದ್ದಾರೆ. ಎಮರ್ಜೆನ್ಸಿ ಟ್ರಿಪ್ ಸಿಸ್ಟಂ ಹಾಗೂ ಮೆಟ್ರೋ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಕ್ಷಣ ಅನಿಲ್ ಕುಮಾರ್ ಪಾಂಡೆ ಅವರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ ರಕ್ಷಿಸಲಾಗಿದ್ದು, ಅವರಿಗೆ ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದ ಸುಮಾರು 25 ನಿಮಿಷಗಳ ಕಾಲ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು ಪುನಃ ಮೆಟಟ್ರೋ ಸಂಚಾರ ಕಾರ್ಯಾರಂಭಿಸಿದೆ. ಘಟನೆಯ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";