ಕಾಂಗ್ರೆಸ್ ಶಾಸಕರ ಸೂಚನೆ ಮೇರೆಗೆ ಸುಳ್ಳು ಕೇಸ್, ಅಮಾಯಕರ ಬಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕರ್ನಾಟಕ ಕಾಂಗ್ರೆಸ್
ಶಾಸಕರ ಸೂಚನೆ ಮೇರೆಗೆ ಸುಖಾಸುಮ್ಮನೆ ಸುಳ್ಳು ಕೇಸುಗಳನ್ನು ಹಾಕಿ ಅನಗತ್ಯವಾಗಿ ಕಿರುಕುಳ ನೀಡುತ್ತಾ ಜನಸಾಮಾನ್ಯರನ್ನು ಬಲಿ ಪಡೆಯಲಾಗುತ್ತಿದೆ ಎಂದು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ. 

ರಾಜಕೀಯ ಪ್ರೇರಿತ ಎಫ್ಐಆರ್ ಕಾರಣದಿಂದ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರಾಜಪೇಟೆ ಶಾಸಕ ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಮಂಥರ್‌ಗೌಡ ಅವರ ದ್ವೇಷ ರಾಜಕಾರಣಕಿರುಕುಳಕ್ಕೆ ಅಮಾಯಕ ಯುವಕನ ಬಲಿಯಾಗಿದೆ ಎಂದು ಜೆಡಿಎಸ್ ಕಿಡಿ ಕಾರಿದೆ.

ರಾಜ್ಯದಲ್ಲಿ ಪೊಲೀಸ್‌ವ್ಯವಸ್ಥೆಯನ್ನು ಹಾಳು ಗೆಡವಿರುವ ಕಾಂಗ್ರೆಸ್‌ಸರ್ಕಾರಅಭಿವೃದ್ಧಿ ಬಗ್ಗೆ ಪ್ರಶ್ನಿಸಿದರೆ, ಸರ್ಕಾರದ ವೈಫಲ್ಯವನ್ನು ಟೀಕಿಸಿದವರ ಮೇಲೆ ಪೊಲೀಸರನ್ನು ಬಳಸಿಕೊಂಡು ಸುಳ್ಳು ಕೇಸ್‌ಗಳನ್ನು ಹಾಕಿ, ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ.   

ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಜೆಡಿಎಸ್ ಪಕ್ಷ ಆಗ್ರಹಿಸುತ್ತದೆ.

 

 

 

Share This Article
error: Content is protected !!
";