ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್(GBIT) ಯೋಜನೆಗೆ ಬಿಡದಿಯಲ್ಲಿ ಕೃಷಿಕರನ್ನು ಒಕ್ಕಲೆಬ್ಬಿಸುತ್ತಿರುವ ರೈತರ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಹಾಗೂ ಮಹಿಳೆಯರು ಸಿಡಿದೆದ್ದಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ಟೌನ್ಶಿಪ್ಯೋಜನೆ ಕೈಬಿಡುವಂತೆ ಆಗ್ರಹಿಸಿ, ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಧಿಕ್ಕಾರ ಕೂಗಿ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ರೈತರ ಪ್ರತಿಭಟನೆಗೆ ಹೆದರಿದ ಬಾಲಕೃಷ್ಣ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.

