ನಿವೃತ್ತ ಶಿಕ್ಷಕರುಗಳಿಗೆ ಸನ್ಮಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯ ಸರ್ವ ಶಿಕ್ಷಣ ಅಭಿಯಾನದ ನಿವೃತ್ತ ನಿರ್ದೇಶಕ ಎಂ.ಮಲ್ಲಣ್ಣನವರ ನಿವಾಸದಲ್ಲಿ ನಿವೃತ್ತ ಶಿಕ್ಷಕರುಗಳಾದ ಯಲ್ಲಪ್ಪ
, ನುಂಕಪ್ಪ, ತಿಪ್ಪೇಸ್ವಾಮಿ

- Advertisement - 

ಉಪನ್ಯಾಸಕ ನಾಗರಾಜ್ ಬೊಮ್ಮೇನಹಳ್ಳಿ ಹಾಗೂ ನಿವೃತ್ತ ಶಿಕ್ಷಕ, ಸಾಹಿತಿ ಪರಶುರಾಮ್‌ಗೊರಪ್ಪ ದಂಪತಿಗಳನ್ನು ಸನ್ಮಾನಿಸಲಾಯಿತು.

- Advertisement - 

ನಿವೃತ್ತ ಶಿಕ್ಷಕ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿದ ಎಂ.ಮಲ್ಲಣ್ಣ ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಒತ್ತು ಕೊಟ್ಟಿದ್ದರು. ಅವರ ಆಚಾರ-ವಿಚಾರ, ತತ್ವ ಸಿದ್ದಾಂತಗಳನ್ನು ಪಾಲಿಸಿ ಪ್ರತಿಯೊಬ್ಬರು ಶಿಕ್ಷಣವಂತರಾದಾಗ ಮಾತ್ರ ಸಂವಿಧಾನದ ಆಶಯಗಳು ಈಡೇರಿದಂತಾಗುತ್ತದೆ ಎಂದರು.

ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಬೆಳಗಟ್ಟ, ಲೇಖಕ ಹೆಚ್.ಆನಂದ್‌ಕುಮಾರ್, ಯಶೋಧಮ್ಮ, ರತ್ನಮ್ಮ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";