ಹಣ ಪಡೆದು ಜಾಮೀನು ಕೊಡಲು ಬಂದ ಮಹಿಳೆ ವಿರುದ್ಧವೇ ದೂರು ದಾಖಲು

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಹಣದ ಪಡೆದು ಜಾಮೀನು ನೀಡಲು ಬೆಂಗಳೂರಿನಿಂದ ಬಂದಿದ್ದ ಮಹಿಳೆ ಸೇರಿ ಇಬ್ಬರ ವಿರುದ್ಧ ನ್ಯಾಯಾಧೀಶರ ಸೂಚನೆ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - 

ಪ್ರಕರಣವೊಂದರಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಬೆಂಗಳೂರಿನ ಗಂಗಮ್ಮ ಎಂಬುವವರು ಬಂದಿದ್ದರು. ಆರೋಪಿ ತನಗೆ ಪರಿಚಯ ಇದ್ದಾರೆ ಎಂದು ತಿಳಿಸಿದ್ದರು.

- Advertisement - 

ಪ್ರಶ್ನಿಸಿದಾಗ ಗಂಗಮ್ಮಳಿಗೂ, ಆರೋಪಿಗೂ ಪರಿಚಯವಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಇದರಿಂದ ಆಕೆಯ ವಿರುದ್ದ ದೂರು ದಾಖಲಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಜಾಮೀನು ನೀಡಿದರೆ ೫ ಸಾವಿರ ರೂ. ಹಣ ನೀಡುವುದಾಗಿ ಮಾಮು ಎಂಬಾತ ತಿಳಿಸಿದ್ದ ಎಂದು ನ್ಯಾಯಾಲಯದಲ್ಲಿ ಗಂಗಮ್ಮ ಒಪ್ಪಿಕೊಂಡಿದ್ದಾರೆ. ಪೊಲೀಸರು ಮಾಮುನನ್ನು ಹುಡುಕುತ್ತಿದ್ದಾರೆ.

- Advertisement - 

ಈತ ದಲ್ಲಾಳಿಯಾಗಿ ಜಾಮೀನು ಕೊಡಿಸುವ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಸಂಶಯಿಸಿದ್ದಾರೆ.

Share This Article
error: Content is protected !!
";