70 ವರ್ಷ ಮೇಲ್ಪಟ್ಟ ವೃದ್ಧರಿಗೆ 5 ಲಕ್ಷದ ವರೆಗೂ ಉಚಿತ ಚಿಕಿತ್ಸೆ-ಡಾ.ಸಿ.ಎನ್. ಮಂಜುನಾಥ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ಯೋಜನೆಯಡಿಯಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆರೋಗ್ಯ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷದ ವರೆಗೂ ಉಚಿತ ಚಿಕಿತ್ಸೆ ದೊರಕಲಿದೆ ಎಂದು ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

- Advertisement - 

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಗುರುತಿನ ಚೀಟಿ ಒದಗಿಸುವ ಅಭಿಯಾನ ಮಂಗಳವಾರದಿಂದ ರಾಮನಗರದ ಜಿಲ್ಲಾ ಪಂಚಾಯತ್ ಭವನದಲ್ಲಿರುವ ಸಂಸದರ ಕಚೇರಿಯಲ್ಲಿನಡೆಯಲಿದೆ ಎಂದು ಸಂಸದರು ತಿಳಿಸಿದರು.

- Advertisement - 

ಎಲ್ಲಾ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ.ಸಿ.ಎನ್.ಮಂಜುನಾಥ್ ವಿನಂತಿಸಿಕೊಂಡರು.

 

- Advertisement - 

Share This Article
error: Content is protected !!
";