ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೀರಿನ್ಬಿಲ್ಬಾಕಿ ಇದ್ದವರಿಗೆ ಒನ್ಟೈಮ್ಸೆಟಲ್ಮೆಂಟ್ಗೆ ಅವಕಾಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ನಾಗರಿಕರು ಬಾಕಿ ಇರುವ ನೀರಿನ ಬಿಲ್ಲಿನ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ ಮತ್ತು ದಂಡದ ಮೊತ್ತ ಶೇ.100 ರಷ್ಟು ಮನ್ನಾ ಮಾಡಲು ನಮ್ಮ ಸರ್ಕಾರ ಸಮ್ಮತಿ ನೀಡಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

