ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘಕ್ಕೆ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಮುರುಳೀಧರ ಹಾಲಪ್ಪ ಅವರು ಸಂಪಾದಕರ ಆರೋಗ್ಯ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ 1 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವುದಾಗಿ ಘೋಷಿಸಿದ್ದು, ಇದರ ಮೊದಲ ಭಾಗವಾಗಿ ಸೋಮವಾರ 50000 ಸಾವಿರ ರೂ.ಗಳನ್ನು ನೀಡಿದರು.
ಇಲ್ಲಿಯ ಜಯನಗರದ ಅವರ ನಿವಾಸದಲ್ಲಿ ಸಂಪಾದಕರ ಸಂಘದ ಪದಾಧಿಕಾರಿಗಳಿಗೆ 50 ಸಾವಿರ ರೂ.ಗಳ ನಗದು ನೀಡಿ, ಈ ದೇಣಿಗೆಯನ್ನು ನಿಮ್ಮ ಆರೋಗ್ಯ ಮತ್ತು ನಿಮ್ಮ ಮಕ್ಕಳ ಶೈಕ್ಷಣಾಭಿವೃದ್ದಿಗಾಗಿ ಬಳಸಿಕೊಳ್ಳಿ, ಮುಂದಿನ ವರ್ಷ ಮತ್ತೆ 50 ಸಾವಿರ ರೂ.ಗಳನ್ನು ನೀಡುತ್ತೇನೆ. ಜೊತೆಗೆ ಇತರರೊಂದಿಗೂ ಮಾತನಾಡಿ ನಿಮ್ಮ ಸಂಘಕ್ಕೆ ಸಹಕಾರ ನೀಡುವಂತೆ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಮಾತನಾಡಿ, ಈ ಹಣವನ್ನು ಹಾಲಪ್ಪ ಪ್ರತಿಷ್ಠಾನ ಆರೋಗ್ಯ ಮತ್ತು ಶೈಕ್ಷಣಿಕ ನಿಧಿ ಎಂದು ಸ್ಥಾಪಿಸಿ ಸಂಘದ ಶ್ರೇಯೋಭಿವೃದ್ದಿಗೆ ಬಳಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಜಿ.ಕರುಣಾಕರ, ಉಪಾಧ್ಯಕ್ಷ ಪಿ.ಎಸ್.ಮಲ್ಲಿಕಾರ್ಜುನ ಸ್ವಾಮಿ, ಸಂಘಟನಾ ಕಾರ್ಯದರ್ಶಿ ಸಿ.ಎನ್.ಮಹೇಶ್ ಕುಮಾರ್, ಅಕ್ಷಯ್ ಚೌದರಿ ಹಾಜರಿದ್ದು, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಅವರಿಗೆ ಸಂಘದಿಂದ ಕೃತಜ್ಞತೆ ಸಲ್ಲಿಸಿದರು.

