ಗಿಗ್ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ
ಅವರು ನೀಡಿದ್ದ ಗ್ಯಾರಂಟಿಯಂತೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಗಿಗ್ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನಿಸಿದ್ದು, ಇದಕ್ಕೆ ರಾಹುಲ್ ಗಾಂಧಿ ಅವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

- Advertisement - 

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ಚುನಾವಣಾ ಪ್ರಚಾರದ ಸಮಯದಲ್ಲೂ ಡೆಲಿವರಿ ಬಾಯ್ ಗಳೊಂದಿಗೆ ಸಂವಾದ ನಡೆಸಿ, ಕರ್ನಾಟಕದಲ್ಲಿ ಗಿಗ್ ಕಲ್ಯಾಣ ಮಂಡಳಿ ಸ್ಥಾಪಿಸುವುದಾಗಿ ಘೋಷಿಸಿದ್ದರು.

- Advertisement - 

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್ ಅವರು ಕರ್ನಾಟಕದಲ್ಲಿ ಗಿಗ್ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪಿಸುವ ಕುರಿತು ಮಾಹಿತಿ ನೀಡಿದರು ಎಂದು ಕಾಂಗ್ರೆಸ್ ತಿಳಿಸಿದೆ.

 

- Advertisement - 

Share This Article
error: Content is protected !!
";