ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯೂಎಸ್ ಐ-ಗ್ರೇಜ್ ರೇಟಿಂಗ್ನಲ್ಲಿ ಸ್ವರ್ಣ ಪುರಸ್ಕಾರ ಲಭಿಸಿದ್ದು,
ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಕೆ.ವಿಜಯ್ ಕಾರ್ತಿಕ್ ಹಾಗೂ ಡೀನ್ ಡಾ.ಎಂ.ಶ್ರೀನಿವಾಸರೆಡ್ಡಿ ಅವರು ತೆಲಂಗಾಣ ರಾಜ್ಯಪಾಲ ಜೆಷ್ಣು ದೇವ್ ವರ್ಮಾ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

