ಖೇಲೋ ಇಂಡಿಯಾ ಯೋಜನೆಯಡಿ ಕ್ಷೇತ್ರಕ್ಕೆ ಅನುದಾನ ಒದಗಿಸಿ: ಸಂಸದ ಗೋವಿಂದ ಕಾರಜೋಳ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದಿಂದ  ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅನುದಾನ ಕೋರಿ ಸಂಸದ ಗೋವಿಂದ ಎಂ.ಕಾರಜೋಳರವರು ದೆಹಲಿಯಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಮನಸುಖ್ ಮಾಂಡವೀಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ  ವಿವಿಧೋದ್ದೇಶ ಒಳಾಂಗಣ ಕ್ರೀಡಾಂಗಣ ಹಾಗೂ ಸಿಂಥೆಟಿಕ್ ಫುಟ್‌ಬಾಲ್ ಟ್ರಾಕ್ ನಿರ್ಮಾಣಕ್ಕಾಗಿ ರೂ.೨೭ ಕೋಟಿಹೊಳಲ್ಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಮೂಲಸೌಲಭ್ಯ ಒದಗಿಸಲು ರೂ.೧೮ ಕೋಟಿ, ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಸಿಂಥೆಟಿಕ್ ಟ್ರಾಕ್ ಹಾಗೂ ಈಜುಕೊಳ ನಿರ್ಮಾಣ,

ಚಳ್ಳಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಹಾಕಿ ಟರ್ಫ್ ನಿರ್ಮಾಣ ಸೇರಿದಂತೆ ಈಗಾಗಲೇ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸಚಿವಾಲಯಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದ್ದು, ರಾಜ್ಯ ಸರ್ಕಾರದಿಂದ ಸಲ್ಲಿಸಿರುವ ಪ್ರಸ್ಥಾವನೆಗೆ ಅಗತ್ಯ ಅನುದಾನದೊಂದಿಗೆ ಅನುಮೋದನೆ ನೀಡುವಂತೆ ಸಂಸದರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.

 

- Advertisement -  - Advertisement - 
Share This Article
error: Content is protected !!
";