ನಾಲ್ಕೈದು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ

News Desk

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು ಮುಂದಿನ ನಾಲ್ಕೈದು ತಿಂಗಳಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತ್​ ಚುನಾವಣೆ ನಡೆಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ‌ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ‌ಅವರು, ಈ ಕುರಿತು ಎರಡ್ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ. ಮೀಸಲಾತಿ ರಚಿಸುವುದಾಗಿ ಹೈಕೋರ್ಟ್ ಮುಂದೆ ಒಪ್ಪಿದ್ದೇವೆ. ಅದರ ಆಂತರಿಕ ‌ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

- Advertisement - 

ಸವದತ್ತಿ ಶಾಲೆಯ ನೀರಿನ ಟ್ಯಾಂಕ್​ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್​ಎಸ್​ಎಸ್​ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಶಾಲೆ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ವಿಷ ಹಾಕ್ತಾರೆ ಅಂದ್ರೆ ಇವರೇನು ಮನುಷ್ಯರಾ? ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ,

ವಿಷ ಹಾಕಿದವರು ಯಾರೆಂದು ಗೊತ್ತು. ಏಕೆ ಬಿಜೆಪಿಯವರು ಈ ಬಗ್ಗೆ ಮಾತನಾಡುತ್ತಿಲ್ಲ?. ಎಲ್ಲಿದ್ದಾರೆ ಈಗ?. ಕೋಮು ವಿಷಬೀಜ ಬಿತ್ತುತ್ತಿರುವುದರ ಪರಿಣಾಮವಾಗಿ ಪದೇ ಪದೆ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಅವರು ಟೀಕಾಪ್ರಹಾರ ಮಾಡಿದರು.

- Advertisement - 

ಈ ಬಗ್ಗೆ ಬಿಜೆಪಿ ನಾಯಕರಾದ ಆರ್ ಅಶೋಕ್​, ಬಸವರಾಜ ಬೊಮ್ಮಾಯಿ, ಅರವಿಂದ ಬೆಲ್ಲದ್ ಅವರನ್ನು ಕೇಳಿ, ಚಿಕ್ಕಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಾರೆ ಅಂದ್ರೆ ಇವರು ಮನುಷ್ಯರಾ? ಎಂದು ಕಿಡಿಕಾರಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತೆರಿಗೆ ಹಾಕಿದ್ರು ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕು, ಸುಪ್ರೀಂಕೋರ್ಟ್ ಏನೇ ‌ಹೇಳಿದರೂ ಕಾಂಗ್ರೆಸ್ ನಾಯಕರು ಉತ್ತರ ಕೊಡಬೇಕು, ಶ್ರೀರಾಮ ಸೇನೆ ಹಾಗೂ ಆರ್​ಎಸ್​ಎಸ್​ ಏನೇ ಮಾಡಿದರೂ ‌ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕು ಅಂದ್ರೆ ಬಿಜೆಪಿ ‌ನಾಯಕರ‌ ಬಾಯಿಗೆ ಬೀಗ ಬಿದ್ದಿದೆಯಾ? ಎಂದು‌ ಇದೇ ವೇಳೆ ಸಚಿವರು ವಾಗ್ದಾಳಿ ನಡೆಸಿದರು.

Share This Article
error: Content is protected !!
";