ಸೈನಿಕರ ರಕ್ಷಣೆಗಾಗಿ ಮಹಾ ಮೃತ್ಯುಂಜಯ ಹೋಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೇಶದ ಹೆಮ್ಮೆಯ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಅವರ ಜೀವ ರಕ್ಷಣೆಗಾಗಿ ನಗರದ ಮೆದೇಹಳ್ಳಿ ರಸ್ತೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ಮಹಾ ಮೃತ್ಯುಂಜಯ ಹೋಮ ನೆರವೇರಿಸಲಾಯಿತು. 

ಪಾಕಿಸ್ತಾನದ ಉಗ್ರರ ವಿರುದ್ಧ ಹೋರಾಡುತ್ತಿರುವ ಭೂ ಸೇನೆ ವಾಯು ಸೇನೆ ಹಾಗೂ ನೌಕಾ ಸೇನೆ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪಹಲ್ಗಾವ್ ನಲ್ಲಿ ಭಾರತೀಯರ ಮೇಲೆ ಭಯೋತ್ಪಾದಕರು ನಡೆಸಿದ  ದಾಳಿಗೆ ಪ್ರತೀಕವಾಗಿ ಆಪರೇಷನ್ ಸಿಂಧೂರ ಯಶಸ್ವಿಗಾಗಿ ಪೂಜೆ  ಹಮ್ಮಿಕೊಳ್ಳಲಾಯಿತು. ಜಾಗತಿಕ ಮಟ್ಟದಲ್ಲಿ ಉಗ್ರರ ಉತ್ಪಾದನಾ  ಸ್ಥಾನವಾಗಿರುವ ಪಾಕಿಸ್ತಾನಕ್ಕೆ ಯುದ್ಧ ಮಾಡಲು ಸೈನಿಕರು ಮುಂದಾಗಿದ್ದಾರೆ  ಭಾರತ ದೇಶಕ್ಕೂ ಹಾಗೂ ಸೈನಿಕರಿಗೂ ಯುದ್ಧದಲ್ಲಿ ಪಾಲ್ಗೊಳ್ಳುತ್ತಿರುವ   ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೂ ಯಾವುದೇ ರೀತಿಯ ಜೀವ ಹಾನಿಯಾಗದಿರಲಿ ಹಾಗೂ ಶತ್ರು ಸಂಹಾರವಾಗಲಿ. ಯುದ್ಧ ಬೇಗನೆ ಮುಗಿದು ದೇಶದಲ್ಲಿ ಶಾಂತಿ ನೆಲಸಲಿ ಎಂದು ಶ್ರೀ ಅಯ್ಯಪ್ಪ ಸ್ವಾಮಿ ದೇವರಲ್ಲಿ  ಪೂಜೆ ಹಾಗೂ ಸಂಕಲ್ಪ ಮಾಡಲಾಯಿತು.

ವಿಶೇಷ ಪೂಜೆ ನಂತರ  ದೇವಸ್ಥಾನಕ್ಕೆ ಬಂದಂತಹ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಯಿತು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ   ಶರಣ್ ಕುಮಾರ್, ಕಾರ್ಯದರ್ಶಿ ಎಂ ಪಿ ವೆಂಕಟೇಶ್ ಹಾಗೂ ದೇವಸ್ಥಾನದ ನಿರ್ದೇಶಕ ಮೋಹನ್ ಕುಮಾರ್, ರೇಷ್ಮೆ ಮಂಜುನಾಥ್,  ವಕೀಲ ವಿಜಯಕುಮಾರ್, ರಮೇಶ್,  ಮೋಹನ್ ಗಾಂಧಿ ಹಾಗೂ ದೇವಸ್ಥಾನದ  ಪ್ರಧಾನ ಅರ್ಚಕ ರಘು ಉಪಸ್ಥಿತರಿದ್ದರು.

 

 

Share This Article
error: Content is protected !!
";